
ನವದೆಹಲಿ: ಜಾನುವಾರು ಮಾರುಕಟ್ಟೆಯಿಂದ ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದನ್ನು ನಿಷೇಧಿಸುವ ಮೇ 26ರ ಆದೇಶದಲ್ಲಿ ಯಾವುದ ಬದಲಾವಣೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಮೀನು ಮಾರುಕಟ್ಟೆ ಮತ್ತು ಅಕ್ವೇರಿಯಂ ನಿಯಂತ್ರಣಕ್ಕೆ ಸಂಬಂಧಿಸಿ ಈ ವರ್ಷದ ಮೇನಲ್ಲಿ ಜಾರಿಗೊಳಿಸಲಾಗಿದ್ದ ನೀತಿಯನ್ನು ಮಾತ್ರ ಶನಿವಾರ ಹಿಂಪಡೆಯಲಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ.
ಮೇ ಆದೇಶದಲ್ಲಿ, ನಿಯಮಗಳ ಅನುಸಾರ ದೇಶದಲ್ಲಿ ಅಕ್ವೇರಿಯಂಗೆ ಮೀನು ಮಾರಾಟ ಮಾಡುವ ಎಲ್ಲ ಅಂಗಡಿಗಳು ನೋಂದಣಿ ಮಾಡಿಕೊಳ್ಳಬೇಕು ಮತ್ತು ಮೀನುಗಳನ್ನು ಆರೋಗ್ಯಯುತವಾಗಿ ಕಾಪಾಡಲು ಕೆಲವೊಂದು ನಿಯಮಗಳನ್ನು ಪಾಲಿಸಲು ನಿರ್ದೇಶಿಸಲಾಗಿತ್ತು.
ಸುಮಾರು 158 ಅಲಂಕಾರಿಕ ಮೀನುಗಳ ತಳಿಗಳನ್ನು ಪ್ರದರ್ಶಿಸುವ ಮತ್ತು ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಮೀನುಗಳ ಆರೋಗ್ಯ ಕಾಪಾಡಲು ಪೂರ್ಣ ಪ್ರಮಾಣದ ಮೀನುಗಾರಿಕೆ ತಜ್ಞರನ್ನು ನಿಯೋಜಿಸುವುದು ಕಡ್ಡಾಯವಾಗಿತ್ತು. ಮೀನು ಸಾಕುವ ನೀರಿನ ಟ್ಯಾಂಕ್ನ ಗಾತ್ರ, ನೀರಿನ ಪ್ರಮಾಣ ಮತ್ತು ದಾಸ್ತಾನು ಪ್ರಮಾಣದ ಬಗ್ಗೆ ನಿಯಮಗಳನ್ನು ರೂಪಿಸಲಾಗಿತ್ತು.
ನೂತನ ನಿಯಮಗಳು ದೇಶೀಯ ಅಲಂಕಾರಿಕ ಮೀನು ಸಾಕಣಿಕೆ ಹಾಗೂ ರಫ್ತು ಉದ್ಯಮದ ಮೇಲೆ ಪ್ರಭಾವ ಬೀರುವಂತಿತ್ತು. ಹಲವಾರು ಮನವಿಗಳ ಹಿನ್ನೆಲೆಯಲ್ಲಿ, ಮೇ ಆದೇಶ ಹಿಂಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.