
ವಿಧಾನಪರಿಷತ್ತು: ಮುಜರಾಯಿ ದೇವಸ್ಥಾನಗಳ ಆದಾಯವನ್ನು ಚರ್ಚ್ ಮತ್ತು ಮಸೀದಿಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆಯೇ ಎಂದು ಪಕ್ಷೇತರ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಅಚ್ಚರಿ ಮೂಡಿಸಿದರು.
ಹಿಂದು ದೇವಾಲಯಗಳಿಂದ ಬರುವ ಆದಾಯವನ್ನು ಮಸೀದಿ, ಚರ್ಚ್'ಗಳಿಗೂ ಬಳಸಲಾಗುತ್ತಿದೆ ಎಂಬ ಮಾಹಿತಿಗಳು ವಾಟ್ಸ್ ಆ್ಯಪ್ನಲ್ಲಿ ಹರಿದಾಡುತ್ತಿದೆ. ಇದು ನಿಜವೇ? ಹಾಗಾದರೆ ಹಿಂದಿನ ವರ್ಷ ದೇವಸ್ಥಾನಗಳಿಂದ ಬಂದಿರುವ ರೂ.476 ಕೋಟಿ ಆದಾಯದಲ್ಲಿ ರೂ.316 ಕೋಟಿ ಮಾತ್ರ ವೆಚ್ಚವಾಗಿದೆ. ಉಳಿದ ಹಣ ಎಲ್ಲಿ ಹೋಗಿದೆ? ಇದನ್ನು ಹಜ್ ಯಾತ್ರೆ ಅಥವಾ ಪಾರ್ಥನಾ ಮಂದಿರಗಳಿಗೆ ನೀಡುವ ಸಾಧ್ಯತೆ ಇದೆಯೇ ಎಂದು ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದರು.
ಇದನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಸಚಿವ ರುದ್ರಪ್ಪ ಲಮಾಣಿ, ಹೀಗೆಲ್ಲಾ ಆಗುವುದಕ್ಕೆ ಸಾಧ್ಯವೇ ಇಲ್ಲ. ಇದೆಲ್ಲಾ ಸತ್ಯಕ್ಕೆ ದೂರ. ಯಾರೋ ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿದ್ದನ್ನು ನಿಜ ಎಂದು ತಿಳಿಯಬೇಡಿ. ಇಂಥ ವದಂತಿಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಿದರು. ದೇವಸ್ಥಾನಗಳಿಂದ ಬರುವ ಆದಾಯವನ್ನು ದೇವಸ್ಥಾನಗಳ ಅಭಿವೃದ್ಧಿಗೇ ಬಳಸಲಾಗುತ್ತದೆಯೇ ವಿನಃ ಸರ್ಕಾರ ಕೂಡ ಅದನ್ನು ಪಡೆಯಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.