
ನವದೆಹಲಿ[ಜು.19]: ಬಡಜನರಿಗಾಗಿಯೇ ಆರಂಭಿಸಿದ್ದ ಗರೀಬ್ ರಥ ರೈಲಿಗೆ ಹೊಸ ಬೋಗಿಗಳ ಜೋಡಣೆಯನ್ನು ನಿಲ್ಲಿಸಲು ಕೇಂದ್ರ ಸರ್ಕಾರ ಸೂಚಿಸಿದೆ.
ಇದರಿಂದ ಕಾಲಕ್ರಮೇಣ ತನ್ನ ಸಂಚಾರ ಸ್ಥಗಿತಗೊಳಿಸಿ, ಈ ರೈಲು ಇತಿಹಾಸದ ಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಈ ರೈಲುಗಳನ್ನು ಸಾಮಾನ್ಯ ಮೇಲ್ ಇಲ್ಲವೇ ಎಕ್ಸ್ಪ್ರೆಸ್ ರೈಲುಗಳಾಗಿ ಪರಿವರ್ತಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗರೀಬ್ ರಥ ರೈಲು ತೀರಾ ಹಳೆಯದಾಗಿದ್ದು ಇವುಗಳ ನಿರ್ವಹಣೆಯೂ ತ್ರಾಸದಾಯಕ. ಅಲ್ಲದೇ, ಯಾವುದಾದರೂ ಸಮಸ್ಯೆ ಕಂಡುಬಂದಲ್ಲಿ ದುರಸ್ಥಿ ಮಾಡಲು ಹೆಚ್ಚಿನ ಹಣ ವ್ಯಯವಾಗುತ್ತದೆ. ಇದರಿಂದ ಸರ್ಕಾರ ಈ ರೈಲಿಗೆ ಹೊಸ ಬೋಗಿಗಳ ಜೋಡಣೆ ನಿಲ್ಲಿಸುವಂತೆ ಸೂಚಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.