ಇತಿಹಾಸ ಸೇರಿದ ಯೆಸ್ ಸರ್; ಇನ್ಮುಂದೆ ಜೈ ಹಿಂದ್ ಹೇಳ್ಬೇಕು...

Published : Sep 14, 2017, 11:57 AM ISTUpdated : Apr 11, 2018, 12:38 PM IST
ಇತಿಹಾಸ ಸೇರಿದ ಯೆಸ್ ಸರ್; ಇನ್ಮುಂದೆ ಜೈ ಹಿಂದ್ ಹೇಳ್ಬೇಕು...

ಸಾರಾಂಶ

ಸತ್ನಾ ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದಲೇ ಈ ನೂತನ ನಿಯಮ ಜಾರಿಯಾಗಲಿದೆ ಎನ್ನಲಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಕುರಿತು ಅರಿವು ಮೂಡಿಸಲು ಈ ಕ್ರಮ ಎಂದು ಶಿಕ್ಷಣ ಸಚಿವ ವಿಜಯ್ ಶಾ ಹೇಳಿದ್ದಾರೆ.

ಭೋಪಾಲ್(ಸೆ.14): ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ಇನ್ನು ಮುಂದಿನ ದಿನಗಳಲ್ಲಿ ಶಾಲಾ ಹಾಜರಾತಿ ವೇಳೆ ಯೆಸ್ ಮೇಡಂ ಅಥವಾ ಪ್ರಸೆಂಟ್ ಟೀಚರ್ ಎನ್ನುವಂತಿಲ್ಲ. ಬದಲಾಗಿ ಜೈಹಿಂದ್ ಟೀಚರ್ ಎಂದು ಉತ್ತರಿಸಬೇಕಿದೆ.

ಇದೇ ವರ್ಷದ ಜನವರಿಯಲ್ಲಿ ಎಲ್ಲಾ ಶಾಲೆಗಳಲ್ಲಿ ಧ್ವಜಾರೋಹಣ ಕಡ್ಡಾಯಗೊಳಿಸಿದ್ದ ರೀತಿಯಲ್ಲೇ, ಇದೀಗ ಶಿಕ್ಷಕರು, ವಿದ್ಯಾರ್ಥಿಗಳ ಹಾಜರಾತಿ ಹಾಕುವ ವೇಳೆ ಯೆಸ್ ಎನ್ನುವ ಬದಲಿಗೆ ಜೈ ಹಿಂದ್ ಎಂದು ಹೇಳುವ ಆದೇಶವನ್ನು ನ.1ರಿಂದ ಜಾರಿಗೆ ತರಲು ಮುಂದಾಗಿದೆ.

ಆದರೆ, ಸತ್ನಾ ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದಲೇ ಈ ನೂತನ ನಿಯಮ ಜಾರಿಯಾಗಲಿದೆ ಎನ್ನಲಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಕುರಿತು ಅರಿವು ಮೂಡಿಸಲು ಈ ಕ್ರಮ ಎಂದು ಶಿಕ್ಷಣ ಸಚಿವ ವಿಜಯ್ ಶಾ ಹೇಳಿದ್ದಾರೆ.

ಆದರೆ, ಇದಕ್ಕೆ ಆಕ್ಷೇಪಿಸಿರುವ ವಿಪಕ್ಷ ಕಾಂಗ್ರೆಸ್ ಮತ್ತು ಶಿಕ್ಷಣ ತಜ್ಞರು, ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಹೆಚ್ಚಳದ ಬಗ್ಗೆ ಗಮನ ಹರಿಸ ಬಹುದಿತ್ತು ಎಂದು ಹೇಳಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ