ಕರ್ನಾಟಕದಲ್ಲಿ ಇನ್ಮುಂದೆ ಎಲ್ಲಾ ಕಡೆ ಸೆಲ್ಫೀ ತೆಗೆಯುವ ಹಾಗಿಲ್ಲ

Published : Dec 29, 2016, 04:55 PM ISTUpdated : Apr 11, 2018, 12:51 PM IST
ಕರ್ನಾಟಕದಲ್ಲಿ ಇನ್ಮುಂದೆ ಎಲ್ಲಾ ಕಡೆ ಸೆಲ್ಫೀ ತೆಗೆಯುವ ಹಾಗಿಲ್ಲ

ಸಾರಾಂಶ

ಪ್ರವಾಸಿಗರ ಪ್ರಾಣಕ್ಕೆ ಅಪಾಯವಿರುವ ಬೆಟ್ಟ, ನದಿ ಹಾಗೂ ಜಲಪಾತಗಳಂತಹ ಸ್ಥಳಗಳಲ್ಲಿ ಇನ್ಮುಂದೆ ಸೆಲ್ಫೀ ತೆಗೆಯುವುದನ್ನು ನಿಷೇಧಿಸಿ ಪ್ರವಾಸೋದ್ಯಮ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು (ಡಿ.29): ಮುಂಬರುವ ರಜೆಗಳಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಇರಾದೆಯಿದೆಯೇ? ಹೌದಾದಲ್ಲಿ ಈ ಸೂಚನೆಯನ್ನು ಗಮನದಲ್ಲಿಟ್ಟುಕೊಳ್ಳಿ.

ಸೆಲ್ಫೀ ತೆಗೆಯುವ ಸಂದರ್ಭದಲ್ಲಿ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫೀ ತೆಗೆಯುವುದನ್ನು ಇನ್ಮುಂದೆ ನಿಷೇಧಿಸಿದೆ.

ಪ್ರವಾಸಿಗರ ಪ್ರಾಣಕ್ಕೆ ಅಪಾಯವಿರುವ ಬೆಟ್ಟ, ನದಿ ಹಾಗೂ ಜಲಪಾತಗಳಂತಹ ಸ್ಥಳಗಳಲ್ಲಿ ಇನ್ಮುಂದೆ ಸೆಲ್ಫೀ ತೆಗೆಯುವುದನ್ನು ನಿಷೇಧಿಸಿ ಪ್ರವಾಸೋದ್ಯಮ ಇಲಾಖೆ ಸುತ್ತೋಲೆ ಹೊರಡಿಸಿದೆ.

ಇಂತಹ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವುದಾಗಿ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಈ ಮುಂಚೆ ಹೇಳಿದ್ದರು.

ಆದುದರಿಂದ ಇನ್ಮುಂದೆ ನಂದಿಹಿಲ್ಸ್, ಸವಣದುರ್ಗ ಬೆಟ್ಟ ಮುಂತಾದ 50 ಸ್ಥಳಗಳಲ್ಲಿ ಅಪಾಯಕಾರಿ ಪಾಯಿಂಟ್'ಗಳಲ್ಲಿ ಸೆಲ್ಫೀ ತೆಗೆಯುವ ಹಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!