
ಬೆಂಗಳೂರು(ಜು. 30) ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡುತ್ತದೆ ಎಂದು ಗೊತ್ತಿತ್ತು. ಆದರೆ ಇಷ್ಟು ಬೇಗ ಮಾಡಲಿದೆ ಎಂದು ಗೊತ್ತಿರಲಿಲ್ಲ. ರದ್ದು ಪಡಿಸಬೇಕಾದರೆ ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗಬೇಕು. ಹೇಗೆ ರದ್ದು ಪಡಿಸಿದರೋ ಗೊತ್ತಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ಹೇಗೆ ನಿಷೇಧ ಮಾಡಿದ್ದೀರಿ ಎಂದು ರೋಷನ್ ಬೇಗ್ ಕೇಳಬೇಕು. ಕಾಂಗ್ರೆಸ್ ಬಿಟ್ಟು ಬಿಜೆಪಿ ಹೋಗ್ತಿದ್ದಾರೆ. ಎಲ್ಲಾ ಧರ್ಮದವರು ಟಿಪ್ಪು ಜಯಂತಿ ಆಚರಿಸಿಕೊಂಡು ಬಂದಿದ್ದಾರೆ. ಎಲ್ಲಾ ಕಡೆ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಇನ್ನೂ ಮುಂದೆ ಮತ್ತಷ್ಟು ಜೋರಾಗಿ ಆಚರಿಸುತ್ತೇವೆ ಎಂದರು.
ಟಿಪ್ಪು ಜಯಂತಿ ಆಚರಣೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾವು ಆಚರಣೆ ಮಾಡೇ ಮಾಡ್ತೆವೆ ಎಂದು ಜಮೀರ್ ಅಹಮದ್ ಖಾನ್ ಗುಡುಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.