ಉ.ಪ್ರ: ಚುನಾವಣೆ ಸಮೀಪಿಸುತ್ತಿದ್ದಂತೆ ಸಮಾಜವಾದಿ ಪಕ್ಷದಲ್ಲಿ ಹೆಚ್ಚುತ್ತಿರುವ ಬಿರುಕು

Published : Oct 23, 2016, 12:14 PM ISTUpdated : Apr 11, 2018, 12:45 PM IST
ಉ.ಪ್ರ: ಚುನಾವಣೆ ಸಮೀಪಿಸುತ್ತಿದ್ದಂತೆ ಸಮಾಜವಾದಿ ಪಕ್ಷದಲ್ಲಿ ಹೆಚ್ಚುತ್ತಿರುವ ಬಿರುಕು

ಸಾರಾಂಶ

ರಾಮಗೋಪಾಲ್ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಶಿವಪಾಲ್ ಯಾದವ್, ರಾಮಗೋಪಾಲ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದ್ದಾರೆ.

ಲಕ್ನೋ (ಅ.23): ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದಂತೆ, ಸಮಾಜವಾದಿ ಪಕ್ಷದಲ್ಲಿ ಬಿರುಕು ಹೆಚ್ಚಾಗತೊಡಗಿದೆ. ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್, ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮಗೋಪಾಲ್ ಯಾದವ್’ರನ್ನು ಹುದ್ದೆಯಿಂದ ಹಾಗೂ ಪಕ್ಷದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟಿಸಿದ್ದಾರೆ.

ರಾಮಗೋಪಾಲ್ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಶಿವಪಾಲ್ ಯಾದವ್, ರಾಮಗೋಪಾಲ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದ್ದಾರೆ.

ಕಳೆದ  ಕೆಲವು ದಿವಸಗಳಲ್ಲಿ ರಾಮಗೋಪಾಲ್ ಮೂರು ಬಾರಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.  ಅವರ ಮಗ ಅಕ್ಷಯ್ ಯಾದವ್ ಹಾಗೂ ಸೊಸೆ ಹಗರಣವೊಂದರಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಉಳಿಸಲು ರಾಮಗೋಪಾಲ್ ಯಾದವ್ ಬಿಜೆಪಿ ನಾಯಕರ ಸೂಚನೆಯಂತೆ ಕಾರ್ಯವೆಸಗುತ್ತಿದ್ದಾರೆ ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ