ತಾಜ್‌ಮಹಲ್‌ನಲ್ಲಿ ನಮಾಜ್ ಬೇಡ ಎಂದು ಸುಪ್ರೀಂ ಹೇಳಿದ್ದೇಕೆ?

Published : Jul 09, 2018, 03:55 PM ISTUpdated : Jul 09, 2018, 04:07 PM IST
ತಾಜ್‌ಮಹಲ್‌ನಲ್ಲಿ ನಮಾಜ್ ಬೇಡ ಎಂದು ಸುಪ್ರೀಂ ಹೇಳಿದ್ದೇಕೆ?

ಸಾರಾಂಶ

ವಿಶ್ವದ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ನಲ್ಲಿ ಇನ್ನು ಮುಂದೆ ನಮಾಜ್ ಮಾಡುವಂತಿಲ್ಲ. ಹೀಗೊಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಕೆಲ ನಿಬಂಧನೆಗೆ ಒಳಪಡಿಸಿ ಸ್ಥಳೀಯರಿಗೆ ಮಾತ್ರ ನಮಾಜ್ ಮಾಡಲು ಅವಕಾಶ ಇದೆ ಎಂದು ನ್ಯಾಯಾಲಯ ಹೇಳಿದೆ.  

ನವದೆಹಲಿ: ವಿಶ್ವದ ಅದ್ಭುತಗಳಲ್ಲಿ ತಾಜ್ ಮಹಲ್ ಕೂಡ ಒಂದಾಗಿದ್ದು ಭಾರತ ಸ್ಥಾನ ಹೆಚ್ಚಿಸಿರುವ ಅದನ್ನು ರಕ್ಷಿಸಬೇಕಿದೆ. ನಮಾಜ್ ಮಾಡಲು ಬೇರೆ ಮಸೀದಿಗಳಿದ್ದು ಪಾರಂಪರಿಕ ತಾಣ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಾಜ್ ಮಹಲ್ ನಲ್ಲಿ ಹೊರಗಿನವರು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಆಗ್ರಾ ಆಡಳಿತ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯೊಂದು ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಬಳಿಕ ನ್ಯಾಯಾಲಯ ನಮಾಜ್ ಮಾಡಲು ಹಲವು ಮಸೀದಿಗಳಿವೆ. ಜನರು ಅಲ್ಲಿಯೇ ಹೋಗಿ ಪ್ರಾರ್ಥನೆ ಮಾಡಲಿ. ಎಂದು ಹೇಳಿದೆ.

ತಾಜ್ ಮಹಲ್ ಸಂರಕ್ಷಣೆ ಮಾಡುವುದು ಎಲ್ಲರ  ಜವಾಬ್ದಾರಿ ಎಂದು ಹೇಳಿದೆ. ಜನವರಿ 24 ರಂದು ಆದೇಶ ನೀಡಿದ್ದ ತಾಜ್ ಮಹಲ್ ಆಡಳಿತ ಸ್ಥಳೀಯರಿಗೆ ಮಾತ್ರ ನಮಾಜ್ ಮಾಡಲು ಅವಕಾಶ ಎಂದು ಹೇಳಿತ್ತು. ಅಲ್ಲದೇ ಗುರುತಿನ ಚೀಟಿಯನ್ನು ಹೊಂದಿರಬೇಕು ಎಂದು ಹೇಳಿತ್ತು. ಆದರೆ ನಿಯಮಗಳು ಕಟ್ಟು ನಿಟ್ಟಾಗಿ ಜಾರಿಯಾಗಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದ ಗಡಿ ಆನೇಕಲ್‌ನಲ್ಲಿ ದರ್ಶನ್ 'ಡೆವಿಲ್‌'ಗೆ ಹೀಗೆಲ್ಲಾ ಆಗ್ತಿದ್ಯಾ?
ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!