ತಮಿಳುನಾಡಿಗೆ ನೀರು ಬಿಡಲು ಅಭ್ಯಂತರವಿಲ್ಲ: ಎಚ್‌ಡಿಡಿ

Published : Jun 18, 2018, 06:13 PM ISTUpdated : Jun 18, 2018, 06:19 PM IST
ತಮಿಳುನಾಡಿಗೆ ನೀರು ಬಿಡಲು ಅಭ್ಯಂತರವಿಲ್ಲ: ಎಚ್‌ಡಿಡಿ

ಸಾರಾಂಶ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ನಮಗೆ ಯಾವ ಆಕ್ಷೇಪ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ತಮಿಳುನಾಡಿನ ಹೊಸೂರು ಸಮೀಪದ ಮನ್ನಮಂಗಳಂ‌ ಗ್ರಾಮದ ಕರಗತಮ್ಮ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಈ ರೀತಿ ಪ್ರತಿಕ್ರಿಯಿಸಿದ್ದಾರೆ.  

ಮದ್ರಾಸ್ [ಜೂನ್ 18]  ತಮಿಳುನಾಡಿಗೆ ಕಾವೇರಿ ನೀರು ಬಿಡಲು ನಮಗೆ ಯಾವ ಆಕ್ಷೇಪ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ತಮಿಳುನಾಡಿನ ಹೊಸೂರು ಸಮೀಪದ ಮನ್ನಮಂಗಳಂ‌ ಗ್ರಾಮದ ಕರಗತಮ್ಮ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಈ ವೇಳೆ ತಮಿಳುನಾಡು‌ ಸರ್ಕಾರದ ಕ್ರೀಡಾ ಸಚಿವ ಬಾಲಕೃಷ್ಣ ಬರಮಾಡಿಕೊಂಡು ಆತ್ಮೀಯವಾಗಿ ಸನ್ಮಾನಿಸಿದರು.

ಈ ವೇಳೆ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾವೇರಿ ನದಿ ನೀರು ಹಂಚಿಕೆ ವಿವಾದ 100 ವರ್ಷಗಳ ಹಿಂದಿನಿಂದ ನಡೆಯುತ್ತದೆ. ಕರ್ನಾಟಕಕ್ಕಿಂತಲೂ ತಮಿಳುನಾಡಿನಲ್ಲಿ ಕಾವೇರಿ ಹೆಚ್ಚು ಹರಿವನ್ನ ಹೊಂದಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಸಮಿತಿ ರಚನೆ ಕೇಂದ್ರ ಸರ್ಕಾರ ಇನ್ನು ಮುಂದಾಗಿಲ್ಲ. ಈ ವಿಚಾರವಾಗಿ ಸುದೀರ್ಘ ಹೋರಾಟ ನಡೆಯುತ್ತಿದ್ದು, ಸದ್ಯ ಈಗ ಅಂತಿಮ ಸ್ವರೂಪವನ್ನು ತೆಗೆದುಕೊಂಡಿದೆ. ಸುಪ್ರೀಂಕೋರ್ಟ್ ಮತ್ತು ಕೇಂದ್ರ ಸರ್ಕಾರ ರಚನೆ ಮಾಡಿರುವ ಸಮಿತಿಗಳು ಇನ್ನು ಜಾರಿಗೆ ಬಂದಿಲ್ಲ ಎಂದರು.

ಇನ್ನು ಪ್ರತಿ ಹತ್ತು ದಿನಗಳಿಗೊಮ್ಮೆ ಜಲಾಶಯಗಳ ನೀರಿನ ಅಳತೆ ಮಾಡುವುದು ಹಾಗೂ ಸಮಿತಿಯವರು ಸೂಚಿಸುವಂತಹ ಬೆಳೆಗಳನ್ನು ರೈತರು ಬೆಳೆಯುವುದು ಕಷ್ಟ.‌ ಈ ಭಾರಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿರುವ ಹಿನ್ನಲೆ ಈ ರೀತಿ ನಡೆಯುತ್ತದೆ ಎಂದು ತಿಳಿಸಿದರು.

ಜಲಾಶಯಗಳಲ್ಲಿ ನೀರಿಲ್ಲದ ವೇಳೆ ಹತ್ತು ದಿನಗಳಿಗೊಮ್ಮೆ ನೀರಿನ ಅಳತೆ ಮಾಡಿ ನೀರು ಬಿಡುವುದು ಅವೈಜ್ಞಾನಿಕ ವಿಚಾರವಾಗಿದ್ದು, ಈ ಬಗ್ಗೆ ಎರಡು ರಾಜ್ಯಗಳ ಸರ್ಕಾರ ಒಂದು ಒಮ್ಮತದ ತಿರ್ಮಾನ ಕೈಗೊಳ್ಳುವ ಅವಶ್ಯಕತೆ ಇದೇ. ಈ ಬಗ್ಗೆ ಕಮಲಾಹಸನ್ ಸಹ ಮುಖ್ಯ ಮಂತ್ರಿ ಕುಮಾರಸ್ವಾಮಿ ಯೊಂದಿಗೆ ಚರ್ಚೆ ನಡೆಸಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ