
ಮೈಸೂರು (ಅ.14): ಈಗ ನಾನು ನೀಡುತ್ತಿರುವ ರಾಜಿನಾಮೆ ನೋವು ಮತ್ತು ಸ್ವಾಭಿಮಾನ ಎರಡೂ ಸೇರಿದ ನಿರ್ಧಾರವಾಗಿದ್ದು, ಯಾರಿಂದಲೂ ರಾಜಿನಾಮೆ ತಡೆಯಲಾಗುವುದಿಲ್ಲ ಎಂದು ಮಾಜಿ ಸಚಿವ ಹಾಗೂ ನಂಜನಗೂಡು ಶಾಸಕ ವಿ. ಶ್ರೀನಿವಾಸಪ್ರಸಾದ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸ್ವಾಭಿಮಾನಕ್ಕೆ ಧಕ್ಕೆ ಬಂದ ಜಾಗದಲ್ಲಿ ಇರಬೇಡಿ ಎಂದಿದ್ದರು. ಅವರ ಹಿತವಚನ ಕೂಡ ನನ್ನ ರಾಜಿನಾಮೆಗೆ ಕಾರಣವಾಗಿದೆ. ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ಗೆ ರಾಜಿನಾಮೆ ನೀಡಲು ನಿರ್ಧರಿಸಿರುವ ವಿಚಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸದ್ಯದಲ್ಲಿಯೇ ಕ್ಷೇತ್ರದ ಮತದಾರರ ಸಭೆ ನಡೆಸಿ ಚರ್ಚಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಇದೇ 17 ರಂದು ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸುತ್ತೇನೆ. ಮೊದಲು ಕಾಂಗ್ರೆಸ್ನಿಂದ ಹೊರಬಂದು, ಬಳಿಕ ನನ್ನ ಎಲ್ಲ ನೋವುಗಳನ್ನು ಹೇಳುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರ್ರಚನೆ ಮಾಡುವಾಗ ಪರಿಣಾಮಕಾರಿ ಮಂತ್ರಿಮಂಡಲ ರಚಿಸುತ್ತೇನೆ ಎಂದಿದ್ದರು. ಆದರೆ, ಅವರ ಪುನಾರ್ರಚನೆಯಲ್ಲಿ ಬೇರೆಯೇ ಉದ್ದೇಶವಿತ್ತು. ಅವರ ನೂತನ ಮಂತ್ರಿಮಂಡಲ ಇನ್ನೂ ದುರ್ಬಲವಾಯಿತು ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.