
ನವದೆಹಲಿ: ಅಂತರ್ಜಾತಿ ವಿವಾಹಕ್ಕೆ ಯಾರೂ ಅಡ್ಡಿಪಡಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಮಹತ್ವದ ಆದೇಶ ನೀಡಿದೆ. ವಯಸ್ಕ, ಪುರುಷ ಹಾಗೂ ವಯಸ್ಕ ಮಹಿಳೆ ಅಂತರ್ಜಾತಿ ವಿವಾಹವಾಗುತ್ತಿದ್ದರೆ ಅವುಗಳಿಗೆ ಯಾವುದೇ ಖಾಪ್ (ಜಾತಿ) ಪಂಚಾಯಿತಿ, ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಘಟನೆಗಳು, ಸಮಾಜಗಳು ಅಡ್ಡಿಪಡಿಸುವಂತಿಲ್ಲ ಎಂದು ಮುಖ್ಯ ನ್ಯಾಯಾಧೀಶ ನ್ಯಾ| ದೀಪಕ್ ಮಿಶ್ರಾ, ನ್ಯಾ| ಎ.ಎಂ. ಖಾನ್ವಿಲ್ಕರ್ ಹಾಗೂ ನ್ಯಾ| ಡಿ.ವೈ. ಚಂದ್ರಚೂಡ ಅವರ ನ್ಯಾಯಪೀಠ ಹೇಳಿದೆ.
ಅಂತರ್ ಗೋತ್ರ ಅಥವಾ ಅಂತರ್ಜಾತಿ ವಿವಾಹಗಳ ವಿರುದ್ಧ ಕುಟುಂಬದ ಮರ್ಯಾದೆ ಎಂಬ ನೆಪದಲ್ಲಿ ಕೊಲೆಗಳು, ಕಿರುಕುಳ ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ತಡೆಯುವುದು ಹೇಗೆ ಎಂಬ ಬಗ್ಗೆ ನ್ಯಾಯಾಲಯದ ಸಲಹೆಗಾರ ರಾಜು ರಾಮಚಂದ್ರನ್ ಅವರು ಸಲಹೆಗಳನ್ನು ನೀಡಬೇಕು. ಈ ಸಲಹೆಗಳನ್ನು ಆಧರಿಸಿ ತಾನು ತೀರ್ಪು ಪ್ರಕಟಿಸಲಿದ್ದೇನೆ ಎಂದೂ ನ್ಯಾಯಪೀಠ ತಿಳಿಸಿದೆ.
ಶಕ್ತಿ ವಾಹಿನಿ ಎಂಬ ಸ್ವಯಂಸೇವಾ ಸಂಸ್ಥೆಯೊಂದು ಅಂತರ್ಜಾತಿ ವಿವಾಹಗಳ ವಿರುದ್ಧ ನಡೆಯುತ್ತಿರುವ ಅಪರಾಧಗಳನ್ನು ನಿಯಂತ್ರಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.