ಕೇಂದ್ರ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

Published : Jun 27, 2018, 10:27 AM IST
ಕೇಂದ್ರ  ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಸಾರಾಂಶ

ನರೇಂದ್ರ ಮೋದಿ ಸರ್ಕಾರವು ಕೇಂದ್ರ  ಸರ್ಕಾರಿ ನೌಕರರಿಗೆ ಶಾಕ್ ನೀಡಿದೆ.7 ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರ ಓವರ್ ಟೈಮ್ ಭತ್ಯೆ ನೀಡದೇ ಇರುವ ನಿರ್ಧಾರ ಕೈಗೊಂಡಿದೆ.

ನವದೆಹಲಿ: ಕೇಂದ್ರದ ನೌಕರರಿಗೆ ಓವರ್ ಟೈಮ್ ಭತ್ಯೆ ನೀಡದೇ ಇರುವ ನಿರ್ಧಾರ ಕೈಗೊಳ್ಳುವ ಮೂಲಕ ನರೇಂದ್ರ ಮೋದಿ ಸರ್ಕಾರವು ಕೇಂದ್ರ  ಸರ್ಕಾರಿ ನೌಕರರಿಗೆ ಶಾಕಿಂಗ್ ನೀಡಿದೆ. 7 ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನು ಹೊರತುಪಡಿಸಿದರೆ ಇತರ ಯಾವುದೇ ಉದ್ಯೋಗಿಗೂ ಓವರ್‌ಟೈಮ್ ಭತ್ಯೆ ನೀಡದೇ ಇರಲು 7 ನೇ ವೇತನ ಆಯೋಗದ ಶಿಫಾರಸಿನಂತೆ ತೀರ್ಮಾನಿಸಲಾಗಿದೆ. 

ಇತ್ತೀಚಿನ ವರ್ಷಗಳಲ್ಲಿ ಗಣನೀಯ ವೇತನ ಏರಿಕೆಯಾಗಿದ್ದು, ಇದನ್ನು ಗಮನದಲ್ಲಿ ಇರಿಸಿಕೊಂಡು ಈ ಕ್ರಮ ಜರುಗಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಎಲ್ಲ ಸಚಿವಾಲಯಗಳು, ಹಾಗೂ ಕಚೇರಿಗಳಲ್ಲಿ ಈ ನಿರ್ಣಯ ಜಾರಿಯಾಗಲಿದೆ.

ಒ.ಟಿ.ಗೆ ಷರತ್ತು: ಇದೇ ವೇಳೆ, ಈ ವಿಭಾಗದ ನೌಕರರ ಓವರ್‌ಟೈಂ ಕೆಲಸವನ್ನು ಬಯೋಮೆಟ್ರಿಕ್ ಜತೆಗೆ ಲಿಂಕ್ ಮಾಡಲು ನಿರ್ಧರಿಸಲಾಗಿದೆ. ಹಿರಿಯ ಅಧಿಕಾರಿ ತುರ್ತು ಕೆಲಸದ ನಿಮಿತ್ತ ಇವರನ್ನು ಹೆಚ್ಚಿನ ಅವಧಿಗೆ ಕೆಲಸ ಮಾಡಿಸಿಕೊಳ್ಳಲಾಗಿದೆ ಎಂದು ಲಿಖಿತವಾಗಿ ನೀಡಬೇಕು. ಆಗ ಮಾತ್ರ ಒ.ಟಿ. ಭತ್ಯೆ ಪಡೆಯಲು ನೌಕರರು ಅರ್ಹರು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!