
ಮುಂಬೈ (ಸೆ.1): ಜೈಲು ಶಿಕ್ಷೆಗೆ ಗುರಿಯಾಗಿರುವ ಅತ್ಯಾಚಾರಿಗಳು, ಕೊಲೆಗಾರರು ಮತ್ತು ಡಕಾಯಿತರು ಇನ್ನು ಮುಂದೆ ನಿಯಮಿತ ಪೆರೋಲ್ಗೆ ಅರ್ಹರಲ್ಲ. ಈ ಬಗ್ಗೆ ಮಹಾರಾಷ್ಟ್ರದ ಜೈಲು ನಿಯಮಾವಳಿಗಳಲ್ಲಿ ತಿದ್ದುಪಡಿ ಮಾಡಲಾಗಿದೆ. ನಾಸಿಕ್ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಜ್ಜದ್ ಮೊಗುಲ್ ಎಂಬಾತನಿಗೆ ಪರೋಲ್ ನೀಡಿದ್ದು ವಿವಾದಕ್ಕೆ ಕಾರಣವಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪರಿಷ್ಕೃತ ನಿಯಮ ಪ್ರಕಾರ ಪರೋಲ್ಗಾಗಿ ಮನವಿ ಸಲ್ಲಿಸಿದ ವ್ಯಕ್ತಿ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಲ್ಲಿಸಿದ್ದ ಮನವಿ ವಿಚಾರಣೆಗೆ ಬಾಕಿ ಇದ್ದರೆ ಅಥವಾ ಜಾಮೀನು ನಿರಾಕರಿಸಲಾಗಿದ್ದರೆ ಅವರಿಗೆ ಪರೋಲ್ ನೀಡಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.