ನಾಳೆ ಕರೆ ನೀಡಿದ್ದ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್; ಎಂದಿನಂತೆ ಪೆಟ್ರೋಲ್, ಡೀಸೆಲ್ ಲಭ್ಯ

Published : Jul 11, 2017, 04:11 PM ISTUpdated : Apr 11, 2018, 12:45 PM IST
ನಾಳೆ ಕರೆ ನೀಡಿದ್ದ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್; ಎಂದಿನಂತೆ ಪೆಟ್ರೋಲ್, ಡೀಸೆಲ್ ಲಭ್ಯ

ಸಾರಾಂಶ

ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘ (ಎಐಪಿಡಿಎ) ನಾಳೆ ಕರೆ ನೀಡಿದ್ದ ಬಂದ್ ಅನ್ನು ವಾಪಸ್ ತೆಗೆದುಕೊಂಡಿದೆ. ನಾಳೆ ಎಂದಿನಂತೆ ಪೆಟ್ರೋಲ್ ಮತ್ತು ಡಿಸೇಲ್ ದೇಶಾದ್ಯಂತ ಲಭ್ಯವಿರಲಿದೆ.

ಬೆಂಗಳೂರು (ಜು.11): ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘ (ಎಐಪಿಡಿಎ) ನಾಳೆ ಕರೆ ನೀಡಿದ್ದ ಬಂದ್ ಅನ್ನು ವಾಪಸ್ ತೆಗೆದುಕೊಂಡಿದೆ. ನಾಳೆ ಎಂದಿನಂತೆ ಪೆಟ್ರೋಲ್ ಮತ್ತು ಡಿಸೇಲ್ ದೇಶಾದ್ಯಂತ ಲಭ್ಯವಿರಲಿದೆ.

ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘದ ಜೊತೆ ಮಾತುಕತೆ ನಡೆಸದೇ ಪ್ರತಿದಿನ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಪರಿಷ್ಕರಣೆ ಮಾಡಬೇಕೆಂದು ಸರ್ಕಾರ ಆದೇಶಿಸಿತ್ತು. ಇದನ್ನು ಖಂಡಿಸಿ ನಾಳೆ ಪ್ರತಿಭಟನೆಗೆ ಕರೆ ನೀಡಲಾಗಿತ್ತು.

ಕೇಂದ್ರೀಯ ಪೆಟ್ರೋಲಿಯಂ ಸಚಿವ ಹಾಗೂ ಸರ್ಕಾರಿ ಸ್ವಾಮ್ಯದ 3 ತೈಲ ಕಂಪನಿಗಳು ಎಐಪಿಡಿಎ ಗೆ ಪ್ರತಿಕ್ರಿಯಿಸಿವೆ. ಈ ತಿಂಗಳಾಂತ್ಯದೊಳಗೆ ಸಮಸ್ಯೆಯನ್ನು ಬಗೆಹರಿಸುವುದಾಗಿ ಪೆಟ್ರೋಲಿಯಂ ಸಚಿವರು ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬಂದ್ ವಾಪಸ್ ತೆಗೆದುಕೊಳ್ಳಲು ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘ ನಿರ್ಧರಿಸಿದೆ.

ಬಂದನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ. ಒಂದು ವೇಳೆ ಪೆಟ್ರೋಲಿಯಂ ಸಚಿವರು ಭರವಸೆಯನ್ನು ಈಡೇರಿಸದಿದ್ದರೆ ತಿಂಗಳಾಂತ್ಯದಲ್ಲಿ ಬಂದ್ ನಡೆಸುತ್ತೇವೆಂದು ಎಐಪಿಡಿಎ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?