
ಮುಂಬೈ(ಏ.27): ಭಾರತ ಕ್ರಿಕೆಟ್ ತಂಡದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಎಂ.ಎಸ್.ಧೋನಿಗೆ ಮತ್ತೊಬ್ಬ ಶ್ರೇಷ್ಠ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಐಪಿಎಲ್ ಕನಸಿನ ತಂಡದಲ್ಲಿ ಸ್ಥಾನ ದೊರೆತ್ತಿಲ್ಲ.
ಧೋನಿ ಬದಲಿಗೆ ಯುವ ಆಟಗಾರ ರಿಷಬ್ ಪಂತ್ಗೆ ದಾದಾ ಅವಕಾಶ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಈಚೆಗಷ್ಟೇ ಟಿ-20 ಆಟಗಾರನಾಗಿ ಧೋನಿ ಅರ್ಹತೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ದಾದಾ, ‘‘ಧೋನಿ ಉತ್ತಮ ಟಿ-20 ಆಟಗಾರ ಎನ್ನುವ ನಂಬಿಕೆ ನನಗಿಲ್ಲ. ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಏಕೈಕ ಅರ್ಧಶತಕ ಗಳಿಸಿರುವ ಧೋನಿ ಸಾಧನೆ ಹೇಳಿಕೊಳ್ಳುವಂತಹದ್ದೇನಲ್ಲ’’ ಎಂದು ಅಭಿಪ್ರಾಯಪಟ್ಟಿದ್ದರು. ಗಂಗೂಲಿ ಅಭಿಪ್ರಾಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು.
ಗಂಗೂಲಿ ಕನಸಿನ ಐಪಿಎಲ್ ತಂಡ ಇಂತಿದೆ:
ವಿರಾಟ್ ಕೊಹ್ಲಿ, ಗೌತಮ್ ಗಂಭೀರ್, ಸ್ಟೀವ್ ಸ್ಮಿತ್, ಎಬಿ ಡಿವಿಲಿಯರ್ಸ್ , ನಿತೀಶ್ ರಾಣಾ, ಮನೀಶ್ ಪಾಂಡೆ, ರಿಷಬ್ ಪಂತ್, ಸುನಿಲ್ ನರೇನ್, ಅಮಿತ್ ಮಿಶ್ರಾ, ಭುವನೇಶ್ವರ್ ಕುಮಾರ್, ಕ್ರಿಸ್ ಮೊರಿಸ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.