
ಮಂಗಳೂರು (ಅ.10): ಗೋಕರ್ಣ ದೇವಸ್ಥಾನವನ್ನು ಸರ್ಕಾರ ವಶಪಡಿಸಿಕೊಳ್ಳುವ ಹಾಗೂ ರಾಮಚಂದ್ರಾಪುರ ಮಠಕ್ಕೆ ಆಡಳಿತಾ ಧಿಕಾರಿ ನೇಮಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅವರು ಭಾನುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯನ್ವಯ ಈ ವಿಚಾರ ಹೈ ಕೋರ್ಟ್ನಲ್ಲಿದೆ. ಅರ್ಜಿಯಲ್ಲಿ ಏನೇನು ಪ್ರಸ್ತಾಪವಾಗಿದೆ ಎಂಬುದು ನನಗೆ ತಿಳಿದಿಲ್ಲ. ಈ ವಿಚಾರದಲ್ಲಿ ಸರ್ಕಾರದ ನಿಲುವೇನು ಎಂಬುದನ್ನು ಕೋರ್ಟ್ ಕೇಳಿದೆ. ವಕೀಲರು ಇದಕ್ಕೆ ಉತ್ತರಿಸಲಿದ್ದಾರೆ. ನನ್ನ ನಿಲುವನ್ನು ತೀರ್ಮಾನಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.