
ನವದೆಹಲಿ: ಅಡಕೆಯಲ್ಲಿ ವಿಷಕಾರಿ ಅಂಶ ಅಡಗಿದೆ ಎಂಬ ವರದಿ ತಪ್ಪು. ನಾವು ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿಯಾಗಿ ಅವರಿಗೆ ವಿವರಿಸಿದ್ದೇವೆ. ನಮ್ಮ ವಿವರಣೆಯನ್ನು ಒಪ್ಪಿಕೊಂಡಿರುವ ನಡ್ಡಾ ಅವರು ಅಡಕೆಯಿಂದ ಹಾನಿಯಿಲ್ಲ ಎಂಬ ಬಗ್ಗೆ ಕೇಂದ್ರ ಶೀಘ್ರವೇ ಪ್ರಕಟಣೆ ಹೊರಡಿಸುವ ಭರವಸೆ ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಹೇಳಿಕೆ ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಅಡಕೆಯನ್ನು ಪುರಾತನ ಕಾಲದಿಂದಲು ಬಳಕೆ ಮಾಡಲಾಗುತ್ತಿದ್ದು ಇದರಲ್ಲಿ ಆರೋಗ್ಯಕ್ಕೆ ಪೂರಕ ಅಂಶಗಳಿವೆ ಎಂದು ನಡ್ಡಾ ಅವರಿಗೆ ತಿಳಿಸಿದ್ದಾಗಿ ಹೇಳಿದರು.
ಇದೇ ವೇಳೆ ರಾಜ್ಯದ ‘ತಳವಾರ’ ಮತ್ತು ‘ಪರಿವಾರ’ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.