ಬೆಚ್ಚಿ ಬಿದ್ದ ಜಮ್ಮು ಕಾಶ್ಮೀರ ಜನತೆ : ಮತ್ತೊಂದು ವಿಕೋಪ

Published : Nov 05, 2018, 03:40 PM IST
ಬೆಚ್ಚಿ ಬಿದ್ದ ಜಮ್ಮು ಕಾಶ್ಮೀರ ಜನತೆ : ಮತ್ತೊಂದು ವಿಕೋಪ

ಸಾರಾಂಶ

ಜಮ್ಮು ಕಾಶ್ಮೀರದಲ್ಲಿ ಜನತೆ ಮತ್ತೊಂದು ವಿಕೋಪದಿಂದ ತತ್ತರಿಸಿದ್ದಾರೆ. ಜನಜೀವನ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸಂಪರ್ಕ, ಸಾರಿಗೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. 

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷದ ಮೊದಲ  ಹಿಮಪಾತವಾಗಿದೆ. ವಿಶೇಷವೆಂದರೆ ಹಲವು ದಶಕಗಳಲ್ಲಿ ಇದೇ ಮೊದಲ ಬಾರಿಗೆ ನವೆಂಬರ್ ತಿಂಗಳಿನಲ್ಲಿಯೇ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಹಿಮಪಾತವಾಗಿದ್ದು, ಹಲವೆಡೆ ಸಾಮಾನ್ಯ ಜನಜೀವ ನದ ಮೇಲೆ ಪರಿಣಾಮ ಬೀರಿದೆ. 

ರಾಜ್ಯದ ಹಲವು ನಗರಗಳು ಪೂರ್ಣ ಪ್ರಮಾಣದಲ್ಲಿ ಹಿಮಾವೃತವಾಗಿದ್ದು, ಪ್ರವಾಸಿಗರನ್ನು ಭಾರೀ ಪ್ರಮಾಣದಲ್ಲಿ ಆಕರ್ಷಿಸಿದೆ. 

ಕಳೆದ 24 ಗಂಟೆಗಳಿಂದ ಆಗುತ್ತಿರುವ ಹಿಮಪಾತದಿಂದಾಗಿ ಹಲವು ಪ್ರಮುಖ ರಸ್ತೆ ಮಾರ್ಗಗಳು ಬಂದ್ ಆಗಿವೆ. ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಾಗದೆ, ಕಳೆದೆರಡು ದಿನಗಳಿಂದ ಆಸ್ಪತ್ರೆಗಳು, ಮನೆಗಳು ಹಾಗೂ ಶಾಲೆಗಳು ಸಹ ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ.

ವಿದ್ಯಾರ್ಥಿಗಳು ಕ್ಯಾಂಡಲ್ ಬೆಳಕಿನಲ್ಲೇ ಪರೀಕ್ಷೆ ಬರೆಯುವಂತಾಗಿದೆ. ಈ ನಡುವೆ ಅಕಾಲಿಕ ಹಿಮಪಾತದಿಂದಾಗಿ ಕಟಾವಿಗೆ ಬಂದಿರುವ ಸೇಬುಹಣ್ಣಿನ ಬೆಳೆಗಾರರು ಚಿಂತೆಗೀಡಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ
ವೈರಲ್ ಮೀಮ್ಸ್ ಆಗಿದ್ದ ಯುವಕನ ಫೋಟೋದ ಹಿಂದಿದೆ ನೋವಿನ ಕತೆ: 38 ವರ್ಷ ಬರೀ ದ್ರವಾಹಾರದಲ್ಲೇ ಬದುಕಿದ್ದ ಪಂಚಾಲ್