
ನರಸಿಂಹರಾಜಪುರ: ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಕೇಂದ್ರ ಆರೋಗ್ಯ ಸಚಿವರು ಸಂಸತ್ನಲ್ಲಿ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ಈ ಬಗ್ಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಮಾಮ್ಕೋಸ್ ಉಪಾಧ್ಯಕ್ಷ ವೈ.ಎಸ್. ಸುಬ್ರಮಣ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಾಮ್ಕೋಸ್ ಹಾಗೂ ಇತರೆ ಅಡಕೆ ಮಾರಾಟ ಸಹಕಾರ ಸಂಘಗಳ ನಿಯೋಗ ಶೀಘ್ರದಲ್ಲೇ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಲಿದೆ.
ಅಡಕೆ ಬೆಳೆಗಾರರ ಸಮಸ್ಯೆ ಬಂದಾಗಲೆಲ್ಲಾ ಕೇಂದ್ರ ಸರ್ಕಾರ ಹಾಗೂ ಅಡಕೆ ಬೆಳೆಯುವ ಭಾಗದ ಸಂಸತ್ ಸದಸ್ಯರು ಅಡಕೆ ಬೆಳೆಗಾರರ ನೆರವಿಗೆ ಬಂದಿದ್ದಾರೆ. ಅಡಕೆ ಬೆಳೆಗಾರರು ಆತಂಕ ಪಡುವುದು ಬೇಡ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.