ಅಡಕೆ ಬೆಳೆಗಾರರು ಆತಂಕ ಪಡಬೇಕಿಲ್ಲ

By Suvarna Web DeskFirst Published Feb 18, 2018, 7:55 AM IST
Highlights

ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಕೇಂದ್ರ ಆರೋಗ್ಯ ಸಚಿವರು ಸಂಸತ್‌ನಲ್ಲಿ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ಈ ಬಗ್ಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಮಾಮ್ಕೋಸ್‌ ಉಪಾಧ್ಯಕ್ಷ ವೈ.ಎಸ್‌. ಸುಬ್ರಮಣ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನರಸಿಂಹರಾಜಪುರ: ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಕೇಂದ್ರ ಆರೋಗ್ಯ ಸಚಿವರು ಸಂಸತ್‌ನಲ್ಲಿ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ಈ ಬಗ್ಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಮಾಮ್ಕೋಸ್‌ ಉಪಾಧ್ಯಕ್ಷ ವೈ.ಎಸ್‌. ಸುಬ್ರಮಣ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಮ್ಕೋಸ್‌ ಹಾಗೂ ಇತರೆ ಅಡಕೆ ಮಾರಾಟ ಸಹಕಾರ ಸಂಘಗಳ ನಿಯೋಗ ಶೀಘ್ರದಲ್ಲೇ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಲಿದೆ.

ಅಡಕೆ ಬೆಳೆಗಾರರ ಸಮಸ್ಯೆ ಬಂದಾಗಲೆಲ್ಲಾ ಕೇಂದ್ರ ಸರ್ಕಾರ ಹಾಗೂ ಅಡಕೆ ಬೆಳೆಯುವ ಭಾಗದ ಸಂಸತ್‌ ಸದಸ್ಯರು ಅಡಕೆ ಬೆಳೆಗಾರರ ನೆರವಿಗೆ ಬಂದಿದ್ದಾರೆ. ಅಡಕೆ ಬೆಳೆಗಾರರು ಆತಂಕ ಪಡುವುದು ಬೇಡ ಎಂದು ಹೇಳಿದ್ದಾರೆ.

click me!