ನೋಟು ನಿಷೇಧದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಜೇಟ್ಲಿ

Published : Nov 17, 2016, 02:16 PM ISTUpdated : Apr 11, 2018, 12:42 PM IST
ನೋಟು ನಿಷೇಧದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಜೇಟ್ಲಿ

ಸಾರಾಂಶ

ಒಂದು ವಿಷಯ ಸ್ಪಷ್ಟವಾಗಿರಲಿ, ಆ ಕ್ರಮವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ.  ದೇಶದ ಆರ್ಥಿಕ ಪರಿಸ್ಥಿಯನ್ನು ಶುದ್ಧೀಕರಿಸಲು ಪ್ರಧಾನಿ ಈ ಕ್ರಮ ಕೈಗೊಂಡಿದ್ದಾರೆ, ಇದನ್ನು ಮುಂದುವರೆಸುತ್ತೇವೆ, ಎಂದು ಜೇಟ್ಲಿ ಹೇಳಿದ್ದಾರೆ.

ನವದೆಹಲಿ (ನ.17): ದೇಶದ ಆರ್ಥಿಕ ಪರಿಸ್ಥಿಯನ್ನು ಶುದ್ಧೀಕರಿಸಲು ಕೈಗೊಂಡಿರುವ ನೋಟಿನ ಅಪಮೌಲ್ಯೀಕರಣ ಕ್ರಮದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಕೇಂದ್ರ ಸರ್ಕಾರದ ಕ್ರಮನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳಿಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಖಡಕ್ ಪ್ರತ್ಯುತ್ತರ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್, ನೋಟು ನಿಷೇಧವನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿವೆ. ಒಂದು ವಿಷಯ ಸ್ಪಷ್ಟವಾಗಿರಲಿ, ಆ ಕ್ರಮವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ.  ದೇಶದ ಆರ್ಥಿಕ ಪರಿಸ್ಥಿಯನ್ನು ಶುದ್ಧೀಕರಿಸಲು ಪ್ರಧಾನಿ ಈ ಕ್ರಮ ಕೈಗೊಂಡಿದ್ದಾರೆ, ಇದನ್ನು ಮುಂದುವರೆಸುತ್ತೇವೆ, ಎಂದು ಜೇಟ್ಲಿ ಹೇಳಿದ್ದಾರೆ.

ನೋಟು ನಿಷೇಧ ಕ್ರಮವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕಳೆದೆರಡು ದಿನಗಳಿಂದ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ದಿನಗಳೋಳಗೆ  ಸರ್ಕಾರ ಬೇಟಡಿಕೆಯನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಅವರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
‘ಕಿಚ್ಚ’ಬ್ಬಿಸಿದ ಯುದ್ಧ: ತೇಪೆ, ಬೆಣ್ಣೆ ಹಚ್ಚಿದರೂ ನಿಲ್ಲುತ್ತಿಲ್ಲ!