ಪಾದ್ರಿ ಥಾಮಸ್ ಬಿಡುಗಡೆಗೆ ಯಾವುದೇ ಒತ್ತೆ ಹಣ ನೀಡಿಲ್ಲ: ಕೇಂದ್ರದ ಸ್ಪಷ್ಟನೆ

Published : Sep 13, 2017, 04:43 PM ISTUpdated : Apr 11, 2018, 12:39 PM IST
ಪಾದ್ರಿ ಥಾಮಸ್ ಬಿಡುಗಡೆಗೆ ಯಾವುದೇ ಒತ್ತೆ ಹಣ ನೀಡಿಲ್ಲ: ಕೇಂದ್ರದ ಸ್ಪಷ್ಟನೆ

ಸಾರಾಂಶ

ಫಾದ್ರಿಯನ್ನು ಕರೆತರಲು ಸಾಕಷ್ಟು ಪ್ರತ್ಯಕ್ಷ ಹಾಗೂ ಪರೋಕ್ಷ ತಂತ್ರಗಳನ್ನು ಬಳಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ ಸಿಂಗ್ ತಿಳಿಸಿದ್ದಾರೆ

ತಿರುವನಂತಪುರ(ಸೆ.13): ಕಳೆದ ವರ್ಷ ಯೆಮೆನ್‌ನಲ್ಲಿ ಉಗ್ರರ ಒತ್ತೆಯಾಳಾಗಿದ್ದ ಕೇರಳ ಮೂಲದ ಪಾದ್ರಿ ಥಾಮಸ್ ಉಳುನ್ನಲಿಲ್ ಅವರ ಬಿಡುಗಡೆಗಾಗಿ ಯಾವುದೇ ಒತ್ತೆ ಹಣ ನೀಡಲಾಗಿಲ್ಲ.

ಈ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಯಾವುದೇ ಗೊಂದಲ ಮಾಡಿಕೊಳ್ಳದೇ, ತನ್ನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರಿಂದ ಫಾದರ್ ಟಾಮ್ ಅವರನ್ನು ಸುರಕ್ಷಿತವಾಗಿ ರಾಷ್ಟ್ರಕ್ಕೆ ಕರೆತರಲು ಸಾಧ್ಯವಾಯಿತು ಎಂದು ಕೇಂದ್ರ ಸರ್ಕಾರ ಹೇಳಿದೆ.

ಫಾದ್ರಿಯನ್ನು ಕರೆತರಲು ಸಾಕಷ್ಟು ಪ್ರತ್ಯಕ್ಷ ಹಾಗೂ ಪರೋಕ್ಷ ತಂತ್ರಗಳನ್ನು ಬಳಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ ಸಿಂಗ್ ತಿಳಿಸಿದ್ದಾರೆ

ಯೆಮೆನ್ ರಾಷ್ಟ್ರದ ಬಂದರು ನಗರವಾಗಿರುವ ಏಡೆನ್‌'ನಲ್ಲಿ ಕಳೆದ ವರ್ಷ ದಾಳಿ ಎಸಗಿದ ಐಸಿಸ್ ಉಗ್ರರು, ಅಲ್ಲಿಯೇ ವೃದ್ಧಾಶ್ರಮ ನಿರ್ವಹಿಸುತ್ತಿದ್ದ ಥಾಮಸ್‌'ರನ್ನು ಅಪಹರಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ