ಕಾಲಕ್ಕೆ ತಕ್ಕಂತೆ ಸಂವಿಧಾನದ ಸ್ವರೂಪ ಇರುತ್ತದೆ: ಪ್ರಣಬ್

Published : Jul 28, 2019, 08:54 AM ISTUpdated : Jul 28, 2019, 09:17 AM IST
ಕಾಲಕ್ಕೆ ತಕ್ಕಂತೆ ಸಂವಿಧಾನದ ಸ್ವರೂಪ ಇರುತ್ತದೆ: ಪ್ರಣಬ್

ಸಾರಾಂಶ

ಕಾಲಕ್ಕೆ ತಕ್ಕಂತೆ ಸಂವಿಧಾನ ಬದಲಾವಣೆ ತಪ್ಪಲ್ಲ ಎಂದ ಮಾಜಿ ರಾಷ್ಟ್ರಪತಿ ಮುಖರ್ಜಿ| ಸಂವಿಧಾನ ರಚನೆ ವೇಳೆ ನಡೆದ ಚರ್ಚೆಗಳಲ್ಲಿ ಜನರ ಅಭಿಪ್ರಾಯ ಮತ್ತು ಕಾಲಕ್ಕೆ ಅನುಗುಣವಾಗಿ ಸಂವಿಧಾನ ಸ್ವರೂಪವನ್ನು ಬದಲಾವಣೆ, ತಿದ್ದುಪಡಿ ಮಾಡಬಹುದಾಗಿದೆ

ನವದೆಹಲಿ[ಜು.28]: ಕಾಲಕ್ಕೆ ತಕ್ಕಂತೆ ಸಂವಿಧಾನದ ಬದಲಾವಣೆ ಮಾಡುವುದು ತಪ್ಪಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರೇ ಸಂವಿಧಾನ ರಚನೆ ವೇಳೆ ನಡೆದ ಚರ್ಚೆಗಳಲ್ಲಿ ಜನರ ಅಭಿಪ್ರಾಯ ಮತ್ತು ಕಾಲಕ್ಕೆ ಅನುಗುಣವಾಗಿ ಸಂವಿಧಾನ ಸ್ವರೂಪವನ್ನು ಬದಲಾವಣೆ, ತಿದ್ದುಪಡಿ ಮಾಡಬಹುದಾಗಿದೆ. ಅವಶ್ಯಕತೆಗೆ ಅನುಸಾರ ಬದಲಾಗುವುದು ತಪ್ಪಲ್ಲ ಎಂದು ತಿಳಿಸಿದ್ದರು.

ಅಲ್ಲದೇ, ಬದಲಾವಣೆಯು ಜನರು ಆರಿಸಿ ಕಳುಹಿಸುವ ಜನಪ್ರತಿಧಿಗಳಿಗೂ ಸಂಬಂಧಿಸಿದೆ ಎಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ತಿಳಿಸಿದರು. ಸಂವಿಧಾನದ ಬದಲಾವಣೆ ಮತ್ತು ಅದರ ಸ್ವರೂಪವನ್ನು ಕಾಲವೇ ನಿರ್ಧರಿಸುತ್ತದೆ. ಇಲ್ಲಿ ಜನರೇ ಅಂತಿಮ ನಿರ್ಧಾರ ತೆಗೆದುಕೊಳ್ಳುವವರು. ಶಾಸನವನ್ನು ಬದಲಾಯಿಸುವ ಹಕ್ಕು ಸಂಸತ್ತಿಗೆ ಇದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ