ಭಾರತದಲ್ಲಿ ಅಸಹನೆಗೆ ಅವಕಾಶವಿಲ್ಲ: ರಾಷ್ಟ್ರಪತಿ ಪ್ರಣಬ್

Published : Mar 02, 2017, 05:00 PM ISTUpdated : Apr 11, 2018, 12:51 PM IST
ಭಾರತದಲ್ಲಿ ಅಸಹನೆಗೆ ಅವಕಾಶವಿಲ್ಲ: ರಾಷ್ಟ್ರಪತಿ ಪ್ರಣಬ್

ಸಾರಾಂಶ

ದೇಶದಲ್ಲಿ ಅಸಹಿಷ್ಣು ಭಾರತೀಯನಿಗೆ ಯಾವುದೇ ಅವಕಾಶ ಸಿಗಬಾರದು. ಭಾರತವು ಅನಾದಿ ಕಾಲದಿಂದಲೂ ಸಹಿಷ್ಣುತೆ, ಮುಕ್ತ ವಿಚಾರ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಾಕ್ಷಿಯಾಗಿದೆ. ಟೀಕೆ ಹಾಗೂ ಭಿನ್ನಾಭಿಪ್ರಾಯಗಳಿಗೆ ಅವಕಾಶವಿರಬೇಕು, ಎಂದು ಪ್ರಣಬ್ ಮುಖರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊಚ್ಚಿ (ಮಾ. 02): ಸಮಾಜದಲ್ಲಿ ಅಸಹನೆಗೆ ಉತ್ತೇಜನ ನೀಡುವವರಿಗೆ ಇಂದು ಕಠಿಣ ಸಂದೇಶ ನೀಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಥವರಿಗೆ ದೇಶದಲ್ಲಿ ಅವಕಾಶವಿಲ್ಲವೆಂದಿದ್ದಾರೆ.

ಕೆ.ಎಸ್. ರಾಜಮೋನಿ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರಪತಿ, ಟೀಕೆ ಹಾಗೂ ಭಿನ್ನಾಭಿಪ್ರಾಯಗಳ ಬೆಂಬಲಕ್ಕೆ ನಿಂತಿದ್ದಾರೆ.

ದೇಶದಲ್ಲಿ ಅಸಹಿಷ್ಣು ಭಾರತೀಯನಿಗೆ ಯಾವುದೇ ಅವಕಾಶ ಸಿಗಬಾರದು. ಭಾರತವು ಅನಾದಿ ಕಾಲದಿಂದಲೂ ಸಹಿಷ್ಣುತೆ, ಮುಕ್ತ ವಿಚಾರ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಾಕ್ಷಿಯಾಗಿದೆ. ಟೀಕೆ ಹಾಗೂ ಭಿನ್ನಾಭಿಪ್ರಾಯಗಳಿಗೆ ಅವಕಾಶವಿರಬೇಕು, ಎಂದು ಪ್ರಣಬ್ ಮುಖರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ಹಿಂಸಾಚಾರದಲ್ಲಿ ತೊಡಗಿರುವುದು ಖೇದನೀಯ ವಿಚಾರ. ರಾಷ್ಟ್ರೀಯ ಹಿತಾಸಕ್ತಿ ಹಾಗೂ ದೇಶಪ್ರೇಮ ಭಾವನೆಯನ್ನು ಪುನರವಲೋಕಿಸಲು ಇದು ಸಕಾಲವೆಂದು ರಾಷ್ಟ್ರಪತಿ ಹೇಳಿದ್ದಾರೆ.

ಮಹಿಳೆ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಪ್ರಣಬ್ ಮುಖರ್ಜಿ ಅವರು ಈ  ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್