ರಾಹುಲ್ ಒಂದ್ಸಲ ಬಂದ್ಹೋಗಿ ಅಂತಾ ಆರ್‌ಎಸ್‌ಎಸ್‌?: ಇಲ್ವಲ್ಲಾ ಅಂತಿದೆ ಕಾಂಗ್ರೆಸ್!

Published : Aug 28, 2018, 11:13 AM ISTUpdated : Sep 09, 2018, 08:59 PM IST
ರಾಹುಲ್ ಒಂದ್ಸಲ ಬಂದ್ಹೋಗಿ ಅಂತಾ ಆರ್‌ಎಸ್‌ಎಸ್‌?: ಇಲ್ವಲ್ಲಾ ಅಂತಿದೆ ಕಾಂಗ್ರೆಸ್!

ಸಾರಾಂಶ

ರಾಹುಲ್ ಗಾಂಧಿ ಕರೆದಿಲ್ಲ ಆರ್‌ಎಸ್‌ಎಸ್‌! ವೇಟ್ ಆ್ಯಂಡ್ ಸೀ ಎಂದ ಕಾಂಗ್ರೆಸ್! ನವದೆಹಲಿಯಲ್ಲಿ ಸಂಘದ ವಿಚಾರ ಸಂಕೀರಣ! ರಾಹುಲ್ ಗಾಂಧಿಗೆ ಆಹ್ವಾನ ನೀಡಿದೆಯಾ ಆರ್‌ಎಸ್‌ಎಸ್‌! ಅಧಿಕೃತ ಆಹ್ವಾನ ಬಂದಾಗ ಯೋಚಿಸುವುದಾಗಿ ಕಾಂಗ್ರೆಸ್ ಪ್ರತಿಕ್ರಿಯೆ

ನವದೆಹಲಿ(ಆ.28): ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ ಎಂಬ ಸುದ್ದಿ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಮುಂದಿನ ತಿಂಗಳು ನವದೆಹಲಿಯಲ್ಲಿ ಆರ್‌ಎಸ್‌ಎಸ್‌ ವಿಚಾರ ಸಂಕೀರಣ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

ಆದರೆ ಆರ್‌ಎಸ್‌ಎಸ್‌ನಿಂದ ಇಂತಹ ಯಾವುದೇ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದ್ದು, ಒಂದು ವೇಳೆ ಆರ್‌ಎಸ್‌ಎಸ್‌ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದರೆ ಈ ಕುರಿತು ನಿಧರ್ಧರಿಸಲಾಗುವುದು ಎಂದು ತಿಳಿಸಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಕೇವಲ ಊಹಾಪೋಹಗಳ ಮೇಲೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಆರ್‌ಎಸ್‌ಎಸ್‌ನಿಂದ ಅಧಿಕೃತ ಆಹ್ವಾನ ಬಂದರೆ ಈ ಕುರಿತು ಚರ್ಚೆ ಮಾಡಬಹುದು ಎಂದು ಅವರು ಸ್ಪಷ್ಟಪಡಿಸಿದರು.

ಈ ವಿಚಾರ ಸಂಕೀರಣದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಪಾಲ್ಗೊಳ್ಳಲಿದ್ದು, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಪಿಎಂ ಮುಖ್ಯಸ್ಥ  ಸೀತಾರಾಂ ಯೆಚೂರಿ ಅವರಿಗೆ ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!