ದಕ್ಷಿಣ ಕನ್ನಡದಲ್ಲಿ ನೋ ಸ್ಕೂಲ್ ಬ್ಯಾಗ್ ಡೇ..!

Published : Dec 10, 2017, 05:07 PM ISTUpdated : Apr 11, 2018, 12:55 PM IST
ದಕ್ಷಿಣ ಕನ್ನಡದಲ್ಲಿ ನೋ ಸ್ಕೂಲ್ ಬ್ಯಾಗ್ ಡೇ..!

ಸಾರಾಂಶ

ಉತ್ತರ ಪ್ರದೇಶದ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ‘ನೋ ಬ್ಯಾಗ್ ಡೇ’ (ಬ್ಯಾಗ್ ರಹಿತ ದಿನ) ಜಾರಿಗೆ ಬರುವ ದಿನ ದೂರವಿಲ್ಲ. ಇನ್ಮುಂದೆ ತಿಂಗಳಲ್ಲಿ ಒಂದು ದಿನ ಶಾಲಾ ಮಕ್ಕಳಿಗೆ ಭಾರದ ಬ್ಯಾಗ್‌ನಿಂದ ಮುಕ್ತಿ ನೀಡುವ ಯೋಜನೆ ಜಿಲ್ಲೆಯಲ್ಲಿ ಸದ್ಯದಲ್ಲೇ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ.

ಮಂಗಳೂರು(ಡಿ.10): ಉತ್ತರ ಪ್ರದೇಶದ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ‘ನೋ ಬ್ಯಾಗ್ ಡೇ’ (ಬ್ಯಾಗ್ ರಹಿತ ದಿನ) ಜಾರಿಗೆ ಬರುವ ದಿನ ದೂರವಿಲ್ಲ. ಇನ್ಮುಂದೆ ತಿಂಗಳಲ್ಲಿ ಒಂದು ದಿನ ಶಾಲಾ ಮಕ್ಕಳಿಗೆ ಭಾರದ ಬ್ಯಾಗ್‌ನಿಂದ ಮುಕ್ತಿ ನೀಡುವ ಯೋಜನೆ ಜಿಲ್ಲೆಯಲ್ಲಿ ಸದ್ಯದಲ್ಲೇ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ.

ನಗರದ ರೋಶನಿ ನಿಲಯದಲ್ಲಿ ಶನಿವಾರ ನಡೆದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಲೋಬೋ ಅವರೊಂದಿಗಿನ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಈ ಸಂಬಂಧ ನಿರ್ಣಯವೊಂದನ್ನೂ ಕೈಗೊಳ್ಳಲಾಗಿದೆ. ಡಿಡಿಪಿಐ ಶಿವರಾಮಯ್ಯ ಸಮಾರಂಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದಾಗ, ಮಕ್ಕಳು ಖುಷಿಯಿಂದಲೇ ಅನುಮೋದನೆ ನೀಡಿದರು.

ಹೀಗಾಗಿ ಜಿಲ್ಲೆಯಲ್ಲಿ ತಿಂಗಳ ಒಂದು ದಿನವನ್ನು ಬ್ಯಾಗ್ ರಹಿತ ದಿನವನ್ನಾಗಿ ಪ್ರಾಯೋಗಿಕವಾಗಿ ಜಾರಿಗೆ ತರುವ ಇರಾದೆಯನ್ನು ಜಿಲ್ಲಾ ಶಿಕ್ಷಣ ಇಲಾಖೆ ಹೊರಗೆಡವಿದೆ.

ಶಾಲೆಯಲ್ಲಿ ಶಿಕ್ಷೆ ಬೇಕು!: ಇದೇ ವೇಳೆ ವಿದ್ಯಾರ್ಥಿನಿಯೊಬ್ಬಳು,ಶಾಲೆಗಳಲ್ಲಿ ಶಿಕ್ಷಕರು ಮಕ್ಕಳನ್ನು ಶಿಕ್ಷಿಸುತ್ತಿಲ್ಲ. ಹೀಗಾಗಿ, ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುತ್ತಿದ್ದಾರೆ. ಹಿಂದಿನಂತೆ ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಿಸುವ ಅಧಿಕಾರ ನೀಡಬೇಕು. ಇಂತಹ ನಿಯಮವನ್ನು ಮರು ಜಾರಿ ಮಾಡಬೇಕೆಂದು ಸಚಿವರಿಗೆ ಆಗ್ರಹಿಸಿದರು.

ಇದಕ್ಕೆ ಎಲ್ಲ ಮಕ್ಕಳು ಕರತಾಡನದ ಮೂಲಕ ಬೆಂಬಲ ವ್ಯಕ್ತ ಪಡಿಸಿದರು. ಇದರಿಂದ ಅಚ್ಚರಿಗೊಂಡ ಸಚಿವ ಯು.ಟಿ.ಖಾದರ್, ಮಕ್ಕಳಿಂದಲೇ ಇಂತಹ ಬೇಡಿಕೆ ಬರುವುದು ಅಪರೂಪ. ಮಕ್ಕಳೆಲ್ಲರೂ ಸಹಿ ಮಾಡಿಕೊಡಿ, ನಾವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!