
ಕ್ಸಾನ್(ಡಿ.29): ಇಲ್ಲಿನ ಪಶ್ಚಿಮ ಜೈಂತಿಯಾ ಹಿಲ್ಸ್ ಬಳಿಯ ಕಲ್ಲಿದ್ದಲು ಗಣಿಯಲ್ಲಿ ಕಳೆದ 16 ದಿನಗಳಿಂದ ಸಿಲುಕಿಕೊಂಡಿರುವ ಗಣಿ ಕಾರ್ಮಿಕರಿಗಾಗಿ ಶೋಧ ಮುಂದುವರೆದಿದೆ.
ಸತತ 16 ದಿನಗಳಿಂದ ರಕ್ಷಣಾ ಕಾರ್ಯ ಮುಂದುವರೆದಿದ್ದು, ಇದುವರೆಗೂ ಒಬ್ಬರನ್ನೂ ರಕ್ಷಣೆ ಮಾಡಲಾಗಿಲ್ಲ. ಈ ಮಧ್ಯೆ ಗಣಿಯಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರಿಗೆ ಸೇರಿದ 3 ಹೆಲ್ಮೆಟ್ ಗಳು ದೊರೆತಿದ್ದು, ಕಾರ್ಮಿಕರು ಬದುಕಿರಬಹುದಾದ ಸಾಧ್ಯತೆ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿರುವ ನೌಕಾಸೇನೆ ಮುಳುಗು ತಜ್ಞರು ಮತ್ತು ವಾಯುಸೇನೆಯ ನೀರೆತ್ತುವ ಬೃಹತ್ ಪೈಪ್ಗಳ ಸಹಾಯದಿಂದ ಗಣಿಯಲ್ಲಿನ ಅಪಾರ ಪ್ರಮಾಣದ ನೀರನ್ನು ಹೊರ ಹಾಕಲಾಗುತ್ತಿದೆ. ಆದರೆ ಇದುವರೆಗೂ ಯಾವುದೇ ಕಾರ್ಮಿಕನನ್ನು ಸುರಕ್ಷಿತವಾಗಿ ಹೊರಗೆ ಕರೆತರುವಲ್ಲಿ ಸಫಲತೆ ದೊರಕಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.