16 ದಿನ ಅಗೆದಿದ್ದಕ್ಕೆ ಸಿಕ್ಕಿದ್ದು 3 ಹೆಲ್ಮೆಟ್: ಮೇಘಾಲಯ ಗಣಿ ಕಾರ್ಮಿಕರೆಲ್ಲಿ?

Published : Dec 29, 2018, 03:33 PM ISTUpdated : Dec 29, 2018, 03:43 PM IST
16 ದಿನ ಅಗೆದಿದ್ದಕ್ಕೆ ಸಿಕ್ಕಿದ್ದು 3 ಹೆಲ್ಮೆಟ್: ಮೇಘಾಲಯ ಗಣಿ ಕಾರ್ಮಿಕರೆಲ್ಲಿ?

ಸಾರಾಂಶ

ಮೇಘಾಲಯ ಗಣಿ ಕಾರ್ಮಿಕರ ಕುರಿತು ಸುಳಿವಿಲ್ಲ| ಸತತ 16 ದಿನಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ| ಇದುವೆಗೂ ಸಿಕ್ಕಿದ್ದು ಕೇವಲ 3 ಹೆಲ್ಮೆಟ್ ಗಳು ಮಾತ್ರ| ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುವ ನೌಕಾಸೇನೆ ಮುಳುಗು ತಜ್ಞರು| ಪಶ್ಚಿಮ ಜೈಂತಿಯಾ ಹಿಲ್ಸ್ ಬಳಿಯ ಕಲ್ಲಿದ್ದಲು ಗಣಿಯಲ್ಲಿ ದುರಂತ  

ಕ್ಸಾನ್(ಡಿ.29): ಇಲ್ಲಿನ ಪಶ್ಚಿಮ ಜೈಂತಿಯಾ ಹಿಲ್ಸ್ ಬಳಿಯ ಕಲ್ಲಿದ್ದಲು ಗಣಿಯಲ್ಲಿ ಕಳೆದ 16 ದಿನಗಳಿಂದ ಸಿಲುಕಿಕೊಂಡಿರುವ ಗಣಿ ಕಾರ್ಮಿಕರಿಗಾಗಿ ಶೋಧ ಮುಂದುವರೆದಿದೆ.

ಸತತ 16 ದಿನಗಳಿಂದ ರಕ್ಷಣಾ ಕಾರ್ಯ ಮುಂದುವರೆದಿದ್ದು, ಇದುವರೆಗೂ ಒಬ್ಬರನ್ನೂ ರಕ್ಷಣೆ ಮಾಡಲಾಗಿಲ್ಲ. ಈ ಮಧ್ಯೆ ಗಣಿಯಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರಿಗೆ ಸೇರಿದ 3 ಹೆಲ್ಮೆಟ್ ಗಳು ದೊರೆತಿದ್ದು, ಕಾರ್ಮಿಕರು ಬದುಕಿರಬಹುದಾದ ಸಾಧ್ಯತೆ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿರುವ ನೌಕಾಸೇನೆ ಮುಳುಗು ತಜ್ಞರು ಮತ್ತು ವಾಯುಸೇನೆಯ ನೀರೆತ್ತುವ ಬೃಹತ್ ಪೈಪ್‌ಗಳ ಸಹಾಯದಿಂದ ಗಣಿಯಲ್ಲಿನ ಅಪಾರ ಪ್ರಮಾಣದ ನೀರನ್ನು ಹೊರ ಹಾಕಲಾಗುತ್ತಿದೆ. ಆದರೆ ಇದುವರೆಗೂ ಯಾವುದೇ ಕಾರ್ಮಿಕನನ್ನು ಸುರಕ್ಷಿತವಾಗಿ ಹೊರಗೆ ಕರೆತರುವಲ್ಲಿ ಸಫಲತೆ ದೊರಕಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!