ರಾಮಮಂದಿರಕ್ಕಾಗಿ ಸುಗ್ರೀವಾಜ್ಞೆ ಇಲ್ಲ: ಬಿಜೆಪಿ ಸ್ಪಷ್ಟನೆ

Published : Dec 03, 2018, 08:32 AM IST
ರಾಮಮಂದಿರಕ್ಕಾಗಿ ಸುಗ್ರೀವಾಜ್ಞೆ ಇಲ್ಲ: ಬಿಜೆಪಿ ಸ್ಪಷ್ಟನೆ

ಸಾರಾಂಶ

ಸದ್ಯಕ್ಕಂತೂ ಸುಗ್ರೀವಾಜ್ಞೆ ಹೊರಡಿಸುವ ವಿಷಯ ನಮ್ಮ ಪಕ್ಷದ ಮುಂದಿಲ್ಲ. ಪ್ರಕರಣ ಕುರಿತು ನ್ಯಾಯಾಲಯ ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ- ಬಿಜೆಪಿಯ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯಾ

ಕೋಲ್ಕತಾ[ಡಿ.03]: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಯಾವುದೇ ಸಾಧ್ಯತೆಯನ್ನು ಬಿಜೆಪಿಯ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯಾ ತಳ್ಳಿಹಾಕಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕಂತೂ ಸುಗ್ರೀವಾಜ್ಞೆ ಹೊರಡಿಸುವ ವಿಷಯ ನಮ್ಮ ಪಕ್ಷದ ಮುಂದಿಲ್ಲ. ಪ್ರಕರಣ ಕುರಿತು ನ್ಯಾಯಾಲಯ ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ. ರಾಮಮಂದಿರ ವಿಷಯ, ಬಿಜೆಪಿಗೆ ಲಾಭ ಮಾಡಿದ್ದಕ್ಕಿಂತ ನಷ್ಟಉಂಟು ಮಾಡಿದ್ದೇ ಹೆಚ್ಚು. ರಾಮಮಂದಿರ ವಿಷಯವನ್ನು ಮುಂದಿಟ್ಟುಕೊಂಡು ವಿಪಕ್ಷಗಳು, ಅಲ್ಪಸಂಖ್ಯಾತರನ್ನು ಹೆದರಿಸುವ ಮೂಲಕ ಮತಗಳ ಧ್ರುವೀಕರಣ ಮಾಡುತ್ತಿದೆ. ಹೀಗಾಗಿ ಆದಷ್ಟು ಬೇಗ ಪ್ರಕರಣ ಕುರಿತು ನ್ಯಾಯಾಲಯ ತೀರ್ಪು ನೀಡಿದರೆ ಒಳಿತು ಎಂಬ ಅಭಿಪ್ರಾಯ ಪಕ್ಷದ್ದಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಾಣಕ್ಕೆ ಜನಾಗ್ರಹ ಹೆಚ್ಚಾಗಿದ್ದೇ ಆದಲ್ಲಿ, ಆಗ ಸುಗ್ರೀವಾಜ್ಞೆ ಹೊರಡಿಸುವ ಕುರಿತು ಸರ್ಕಾರ ಇನ್ನೊಮ್ಮೆ ಚಿಂತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು