
ನವದೆಹಲಿ (ಜ.13): ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಡುವ ಮೂಲಕ ದೇಶಾದಾದ್ಯಂತ ಸಂಚಲನ ಮೂಡಿಸಿದ್ದ ಬಿಎಸ್’ಎಫ್ ಯೋಧ ತೇಜ್ ಬಹಾದ್ದೂರ್ ಯಾದವ್ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಗೃಹ ಇಲಾಖೆಯು ಪ್ರಧಾನಿ ಕಾರ್ಯಾಲಯಕ್ಕೆ ನೀಡಿರುವ ಸ್ಪಷ್ಟೀಕರಣದಲ್ಲಿ ಹೇಳಿದೆ.
ಯೋಧರಿಗೆ ಎಲ್ಲೂ ಆಹಾರದ ಕೊರತೆಯಿಲ್ಲ, ಒದಗಿಸುವ ಆಹಾರದ ಗುಣಮಟ್ಟ ಕೂಡಾ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ, ಎಂದು ಗೃಹ ಇಲಾಖೆಯು ಹೇಳಿದೆ.
ಗಡಿ ಕಾಯುವ ಯೋಧರಿಗೆ ಒದಗಿಸಲಾಗುವ ಕಳಪೆ ಆಹಾರ ಹಾಗೂ ಇನ್ನಿತರ ಅವ್ಯವಸ್ಥೆಗಳ ಬಗ್ಗೆ ಬಿಎಸ್’ಎಫ್ ಹಾಗೂ ಸಿಆರ್’ಪಿಎಫ್ ಯೋಧರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್’ಲೋಡ್ ಮಾಡಿದ್ದರು.
ಯೋಧರ ದುಸ್ಥಿತಿಗೆ ಸೇನೆಯ ಹಿರಿಯ ಅಧಿಕಾರಿಗಳ ಭ್ರಷ್ಟಾಚಾರವೇ ಕಾರಣವೆಂದು ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ಕುರಿತು ಸಮಗ್ರ ವರದಿ ನೀಡುವಂತೆ ಪ್ರಧಾನಿ ಕಾರ್ಯಾಲಯ ಗೃಹ ಇಲಾಖೆಗೆ ಸೂಚಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.