ಕೊಡಗು ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ ಇಲ್ಲ

Published : Sep 26, 2018, 08:51 AM IST
ಕೊಡಗು ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ ಇಲ್ಲ

ಸಾರಾಂಶ

 ನಿರಾಶ್ರಿತರಾದ ಕೊಡಗು ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಿಕೊಡುವ ಪ್ರಸ್ತಾವನೆ ಕೈಬಿಡಲಾಗಿದ್ದು ಇದರ ಬದಲಾಗಿ ತಿಂಗಳಿಗೆ 10 ಸಾವಿರ ರು.ಗಳಂತೆ ಪರಿಹಾರ ಧನ ನೀಡಲಾಗುವುದು ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ. 

ಬೆಂಗಳೂರು :  ಪ್ರವಾಹದಿಂದ ಮನೆ ಕಳೆದುಕೊಂಡು ನಿರಾಶ್ರಿತರಾದ ಕೊಡಗು ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಿಕೊಡುವ ಪ್ರಸ್ತಾವನೆ ಕೈಬಿಡಲಾಗಿದೆ. ಬದಲಿಗೆ ನಿರಾಶ್ರಿತರಿಗೆ ತಿಂಗಳಿಗೆ 10 ಸಾವಿರ ರು.ಗಳಂತೆ ಪರಿಹಾರ ಧನ ನೀಡಲಾಗುವುದು ಎಂದು ವಸತಿ ಸಚಿವ ಯು.ಟಿ.ಖಾದರ್‌ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾಮಳೆಗೆ 700ರಿಂದ 800 ಮಂದಿ ನಿರಾಶ್ರಿತರನ್ನು ಗುರುತಿಸಲಾಗಿದೆ. ಅವರೆಲ್ಲರಿಗೆ ಜಿಲ್ಲಾಧಿಕಾರಿಯವರು ಗುರುತಿಸಿದ ಸ್ಥಳಗಳಲ್ಲಿ ತಲಾ 6 ಲಕ್ಷ ರು.ಗಳ ವೆಚ್ಚದಲ್ಲಿ ಮಾದರಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಅಲ್ಲಿಯವರೆಗೆ ಮನೆ ಕಳೆದುಕೊಂಡವರು ಬಾಡಿಗೆ ಮನೆಯಲ್ಲಿ ಇರಲು ಅನುಕೂಲವಾಗುವಂತೆ ಮಾಸಿಕ 10 ಸಾವಿರ ರು.ಗಳನ್ನು ನೀಡಲು ನಿರ್ಧರಿಸಲಾಗಿದೆ. ಆದಷ್ಟುಶೀಘ್ರವೇ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮನೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ನಿವೇಶನ ಇದ್ದವರು ತಾವೇ ಮನೆಗಳನ್ನು ಕಟ್ಟಿಕೊಳ್ಳಲು ಅನುಕೂಲ ಕಲ್ಪಿಸಲಿದ್ದು, ಅವರಿಗೆ ಸರ್ಕಾರ 6 ಲಕ್ಷ ರು.ಗಳ ಸಹಾಯಧನ ನೀಡಲಿದೆ. ಮಾದರಿ ಮನೆಗಳನ್ನು ನಿರ್ಮಿಸಲು ಗೃಹ ಮಂಡಳಿ ಹಾಗೂ ಖಾಸಗಿ ಸಂಸ್ಥೆಯೊಂದಕ್ಕೆ ಟೆಂಡರ್‌ ನೀಡಲಾಗುವುದು. ಮೊದಲಿಗೆ ಈ ಎರಡು ಸಂಸ್ಥೆಗಳು ನಿರ್ಮಿಸುವ ಮಾದರಿ ಮನೆಗಳನ್ನು ಸಾರ್ವಜನಿಕರ ವೀಕ್ಷಣೆಗೂ ಅವಕಾಶ ನೀಡಲಾಗುವುದು. ಸಾರ್ವಜನಿಕರು ಒಪ್ಪುವ ಮನೆಯ ಮಾದರಿಯಂತೆ ಮನೆಗಳನ್ನು ನಿರ್ಮಿಸಿ ನಿರಾಶ್ರಿತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!