ಕೈ ಬಿಟ್ಟ ಕೇಜ್ರಿ : ಯಾರೊಂದಿಗೆ ಮೈತ್ರಿ..?

By Web DeskFirst Published Feb 26, 2019, 8:37 AM IST
Highlights

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ತಿಳಿಸಿದ್ದಾರೆ. ಏಕಾಂಗಿಯಾಗಿ ಲೋಕಸಭಾ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ದಾರೆ. 

ನವದೆಹಲಿ:  2019 ರ ಲೋಕಸಭಾ ಚುನಾವಣೆ ವೇಳೆ ದೆಹಲಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ. ತಾವು ಏಕಾಂಗಿ ಆಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದೇವೆ ಎಂದು ಆಪ್ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿ ವಾಲ್ ಹೇಳಿದ್ದಾರೆ. 

ನರೇಂದ್ರ ಮೋದಿ ಬದಲು ಈ ವ್ಯಕ್ತಿ ಪ್ರಧಾನಿಯಾಗಲು ಸೂಕ್ತ : ನಾಯ್ಡು

‘ಕಹಿ ನೆನಪಿನ ಹೊರತೂ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಮುಂದಾಗಿದ್ದೆವು. 

ದಿಲ್ಲಿ ಸಿಎಂ ಕೇಜ್ರಿವಾಲ್ ಕಾರಿಗೆ ಬಿಜೆಪಿಗರಿಂದ ದೊಣ್ಣೆ ದಾಳಿ?

ಆದರೆ ನಮ್ಮ ಮೈತ್ರಿ ಪ್ರಸ್ತಾ ಪವನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಹೀಗಾಗಿ ನಾವು ಏಕಾಂಗಿಯಾಗಿ ಕಣಕ್ಕೆ ಇಳಿಯಲಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

click me!