
ಬೆಂಗಳೂರು [ಆ.21] : ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನ ಇಲ್ಲ ಎಂದು ಬಿಜೆಪಿಯ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ಕೈಗೊಳ್ಳುವುದು ನಮ್ಮ ಮೊದಲ ಆದ್ಯತೆ. ಸಚಿವ ಸ್ಥಾನ ಎಲ್ಲ ಆಮೇಲೆ. ನಾನು ಇತ್ತೀಚೆಗೆ ಬಾಯಿ ತಪ್ಪಿ ಆಡಿದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ.
ಮನೆ ಕಟ್ಟಿಕೊಡ್ಲಿಲ್ಲ ಅಂದ್ರೆ ಸರ್ಕಾರವನ್ನೇ ಕೆಡವಿ ಬಿಡ್ತೇನೆ ಎಂದ ಬಿಜೆಪಿ ಶಾಸಕ
ಸರ್ಕಾರ ಬೀಳಿಸುತ್ತೇನೆ ಎಂಬ ಉದ್ದೇಶದಿಂದ ನಾನು ಮಾತನಾಡಿರಲಿಲ್ಲ. ಹೀಗಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ದೇವರ ದಯೆಯಿಂದ ಕುಟುಂಬದಲ್ಲಿ ಯಾರಾದರೂ ಒಬ್ಬರು ಸಚಿವರಾಗಿರುತ್ತಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.