
ಬೆಂಗಳೂರು(ಮಾ. 15): ತಮ್ ಬೆಜೆಟ್'ನಲ್ಲಿ ರಾಜ್ಯದ ಎಲ್ಲಾ ವರ್ಗದವರಿಗೆ ಖುಷಿಪಡಿಸಲು ಯತ್ನಿಸಿರುವ ಸಿದ್ದರಾಮಯ್ಯ, ಮದ್ಯಪಾನಿಗಳಿಗೆ ಖುಷಿಯ ಸುದ್ದಿ ಕೊಟ್ಟಿದ್ದಾರೆ. ಮದ್ಯದ ಮೇಲಿನ ವ್ಯಾಟ್ ತೆರಿಗೆಯನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು. ಏಪ್ರಿಲ್ 1ರಿಂದ ವ್ಯಾಟ್ ತೆರಿಗೆ ಇಲ್ಲದೆಯೇ ಮದ್ಯಮಾರಾಟ ನಡೆಯಲಿದೆ. ಇದರೊಂದಿಗೆ ಮದ್ಯಪೇಯಗಳ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದೆ.
ಮದ್ಯ ರಫ್ತು ಮೇಲೆ ವಿಧಿಸಲಾಗಿದ್ದ 2 ರೂ ಆಡಳಿತ ಶುಲ್ಕ(Administrative fee) ಹಾಗೂ ಸ್ಪಿರಿಟ್ ಮೇಲಿನ 1 ರೂ ಆಡಳಿತ ಶುಲ್ಕವನ್ನು ಹಿಂಪಡೆಯಲು ಸರಕಾರ ಯೋಜಿಸಿದೆ.
ಸರಕಾರದ ಈ ಕ್ರಮವನ್ನು ರಾಷ್ಟ್ರೀಯ ರೆಸ್ಟೋರೆಂಟ್ ಸಂಘವು ಸ್ವಾಗಿಸಿದೆ. ಬಾರ್ ಮತ್ತು ಹೋಟೆಲ್ ಉದ್ಯಮಕ್ಕೆ ಸಾಕಷ್ಟು ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.