
ಚೆನ್ನೈ [ಜೂ.13] : ಬಿಸಿಲ ಬೇಗೆಗೆ ಅನೇಕ ರಾಜ್ಯಗಳು ತತ್ತರಿಸಿದ್ದು, ದೇಶದಲ್ಲಿ ತೀವ್ರ ಪ್ರಮಾಣದಲ್ಲಿ ನೀರಿನ ಕೊರತೆ ಎದುರಾಗಿದೆ. ಇದರಿಂದ ಚೆನ್ನೈ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ನಿರ್ವಹಿಸಲು ಸೂಚನೆ ನೀಡಿವೆ.
ನೀರಿನ ಕೊರತೆ ಹೆಚ್ಚಾಗುತ್ತಲೇ ಇದ್ದು, ತಮಗೆ ಅನುಕೂಲವಾದ ಸ್ಥಳದಿಂದ ಕೆಲಸ ನಿರ್ವಹಿಸಲಿ ಎಂದು ನಿರ್ದೇಶನ ನೀಡಿವೆ.
ಚೆನ್ನೈನಲ್ಲಿ ಇದುವರೆಗೂ ಕೂಡ ಮಳೆಯಾಗದ ಕಾರಣ ತೀವ್ರ ನೀರಿನ ಕೊರತೆ ಕಾಡುತ್ತಿದೆ. ನೀರಿನ ಸಮಸ್ಯೆ ನಿರ್ವಹಣೆ ಮಾಡುವ ದೃಷ್ಟಿಯಿಂದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಆಪ್ಶನ್ ನೀಡಿವೆ.
ಮುಂದಿನ ಮೂರು ತಿಂಗಳ ಕಾಲ ನೀರಿನ ಸಮಸ್ಯೆ ಕಾಡಬಹುದಾಗಿದ್ದು, ಸುಮಾರು 12 ಐಟಿ ಕಂಪನಿಗಳು ತಮ್ಮ 5 ಸಾವಿರ ನೌಕರರಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ತಿಳಿಸಿವೆ.
ಇನ್ನು ಅತ್ಯಂತ ಕಡಿಮೆ ಪ್ರಮಾಣದಲ್ಲಿ ನೀರಿನ ಬಳಕೆಗೆ ಒತ್ತು ನೀಡುತ್ತಿದ್ದು, ಉಳಿತಾಯಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಕುಡಿಯುವ ನೀರನ್ನು ಮನೆಯಿಂದಲೇ ತರಲು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.