
ನವದೆಹಲಿ(ಅ.15): 2019ರ ಅರ್ಥಶಾಸ್ತ್ರ ನೊಬೆಲ್ ಪಾರಿತೋಷಕಕ್ಕೆ ಭಾಜನರಾಗಿರುವ ಭಾರತೀಯ ಮೂಲದ ಅಮೆರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಹಿಂದೊಮ್ಮೆ ತಿಹಾರ್ ಜೈಲಿನಲ್ಲಿ ದಿನ ಕಳೆದಿದ್ದರು ಎಂದರೆ ನೀವು ನಂಬಲೇಬೇಕು.
ಹೌದು, 1983ರಲ್ಲಿ ಜೆನ್'ಯು ವಿದ್ಯಾರ್ಥಿಯಾಗಿದ್ದ ಅಭಿಜಿತ್ ಬ್ಯಾನರ್ಜಿ, ಪ್ರತಿಭಟನೆ ಸಂದರ್ಭದಲ್ಲಿ ಅಂದಿನ ಉಪ ಕುಲಪತಿಗಳಿಗೆ ಘೇರಾವ್ ಹಾಕಿ ತಿಹಾರ್ ಜೈಲು ಸೇರಿದ್ದರು.
ಸುಮಾರು ಮೂರು ವರ್ಷಗಳ ಹಿಂದೆ ಹಿಂದೂಸ್ಥಾನ್ ಟೈಮ್ಸ್ಗೆ ನೀಡಿದ ಸಂದರ್ಶನಲ್ಲಿ ಈ ವಿಷಯ ತಿಳಿಸಿದ್ದ ಅಭಿಜಿತ್ ಬ್ಯಾನರ್ಜಿ, ಉಪ ಕುಲಪಪತಿಗಳಿಗೆ ಘೇರಾವ್ ಹಾಕಿದ ಪರಿಣಾಮ ತಮ್ಮನ್ನು 10 ದಿನಗಳ ಕಾಲ ತಿಹಾರ್ ಜೈಲಿನಲ್ಲಿ ಬಂಧಿಸಿ ಹಿಂಸಿಸಲಾಗಿತ್ತು ಎಂದು ಹೇಳಿದ್ದರು.
ಉಪ ಕುಲಪತಿಗಳಿಗೆ ಘೇರಾವ್ ಹಾಕಿದ ಸಂದರ್ಭದಲ್ಲಿ ವಿಶ್ವವಿದ್ಯಾಲಯಕ್ಕೆ ಧಾವಿಸಿದ ಪೊಲೀಸರು, ಅಭಿಜಿತ್ ಬ್ಯಾನರ್ಜಿ ಹಾಗೂ ಅವರ ಸ್ನೇಹಿತರನ್ನು ಬಂಧಿಸಿದ್ದರು. ತಿಹಾರ್ ಜೈಲಿಗೆ ಕೊಂಡೊಯ್ದ ಪೊಲಿಸರು, ತಮಗೆ ಹಾಗೂ ತಮ್ಮ ಸಂಗಾತಿಗಳಿಗೆ 10 ದಿನಗಳ ಕಾಲ ದೈಹಿಕ ಹಿಂಸೆ ನೀಡಿದ್ದರು ಎಂದು ಬ್ಯಾನರ್ಜಿ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆದರೆ ಪ್ರಕರಣ ವಾಪಸ್ ಪಡೆದ ಬಳಿಕ ಅಭಿಜಿತ್ ಬ್ಯಾನರ್ಜಿ 10 ದಿನಗಳ ನರಕ ಯಾತನೆ ಬಳಿಕ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದರು. 1984ರಲ್ಲಿ ಅಭಿಜಿತ್ ತಮ್ಮ ಶಿಕ್ಷಣ ಮುಗಿಸಿ ಜೆಎನ್'ಯು ತೊರೆದಿದ್ದರು. ಪ್ರಸಕ್ತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಜಿತ್ ಅವರ ಜ್ಯೂನಿಯರ್ ಎಂಬುದು ಮತ್ತೊಂದು ವಿಶೇಷ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.