
ಕಾರವಾರ (ನ.23): ರೈಲ್ವೆ ಇಲಾಖೆಯ ಸಂಚಾರಿ ರೈಲು ಆಸ್ಪತ್ರೆ ಲೈಫ್'ಲೈನ್ ಎಕ್ಸ್'ಪ್ರೆಸ್'ನಲ್ಲಿ ಆಪರೇಶನ್ ಮಾಡಿಸಿಕೊಂಡ ಕ್ಯಾನ್ಸರ್ ರೋಗಿಗಳ ಬಾಳು ಈಗ ಅಯೋಮಯವಾಗಿದೆ.
ಉಚಿತ ಆಪರೇಷನ್ ಮಾಡಿಸಿಕೊಂಡು ಉತ್ತಮ ಚಿಕಿತ್ಸೆ ದೊರೆಯುತ್ತದೆ ಎಂದು ನಂಬಿ ಬಂದ ಬಡ ರೋಗಿಗಳು ಈಗ ಪರದಾಡುವಂತಾಗಿದೆ. ಕ್ಯಾನ್ಸರ್ ಅಪರೇಷನ್ ಮಾಡಿದ ತಜ್ಞ ವೈದ್ಯರು ರೋಗಿಗಳನ್ನು ಕುಮಟಾದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ತೆರಳಿದ್ದಾರೆ. ರೋಗಿಗಳನ್ನು ಉಪಚರಿಸುವ ಜವಾಬ್ದಾರಿ ಹೊತ್ತಿದ್ದ ಸರ್ಕಾರಿ ಆಸ್ಪತ್ರೆ ವೈದ್ಯರು ಈಗ ನಿರ್ಲಕ್ಷ್ಯ ವಹಿಸಿದ್ದಾರೆ. ವಿಶೇಷ ಚಿಕಿತ್ಸೆ ನೀಡಬೇಕಿದ್ದ ರೋಗಿಗಳನ್ನ ಆಸ್ಪತ್ರೆಯಲ್ಲಿ ನಿರ್ಲಕ್ಷಿಸಲಾಗಿದ್ದು, ಬಡ ರೋಗಿಗಳು ಪರದಾಡುವಂತಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.