
ನವದೆಹಲಿ (ಜು.01): ಬೀದಿ ಬದಿ ಮೂತ್ರ ವಿಸರ್ಜಿಸುವುದನ್ನು ಆಕ್ಷೇಪಿಸಿದವನನ್ನು ಅಟ್ಟಾಡಿಸಿ ಥಳಿಸಿದ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.
ರಸ್ತೆ ಬದಿ ಮೂತ್ರ ವಿಸರ್ಜಿಸುತ್ತಿದ್ದ ವ್ಯಕ್ತಿಯನ್ನು ಗೌರವ್ ವಸೋಯಾ ಎಂಬವರು ಆಕ್ಷೇಪಿಸಿದ್ದಾರೆ. ಅದಕ್ಕೆ ಕೋಪಗೊಂಡ ಆ ವ್ಯಕ್ತಿ ಗೌರವ್ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಇನ್ನುಳಿದವರು ಕೂಡಾ ಆತನ ಬೆಂಬಲಕ್ಕೆ ನಿಂತಿದ್ದಾರೆ. ಬಳಿಕ ಅವರೆಲ್ಲರೂ ಸೇರಿ ಗೌರವ್’ನನ್ನು ಅಟ್ಟಾಡಿಸಿಕೊಂಡು ಹೋಗಿ, ಥಳಿಸಿದ್ದಾರೆ.
ಪೊಲೀಸರು 5 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಕಳೆದ ಎರಡು ತಿಂಗಳಿನಲ್ಲಿ ಈ ರೀತಿಯ ಘಟನೆ ನಡೆಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಮೇ.29ರಂದು ದೆಹಲಿಯಲ್ಲಿ ಇಂತಹದ್ದೇ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಇಬ್ಬರು ಥಳಿಸಿ ಕೊಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.