
ನೋಯ್ಡಾ(ಡಿ.25): ಪಾರ್ಕ್ಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ನಮಾಜ್ ಮಾಡುವುದನ್ನು ತಡೆಯಬೇಕು ಎಂದು ಉತ್ತರ ಪ್ರದೇಶ ಪೊಲೀಸರು ನೋಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ.
ಒಂದು ವೇಳೆ ಕಂಪನಿಗಳ ಉದ್ಯೋಗಿಗಳು ಪಾರ್ಕ್ಗಳಲ್ಲಿ ನಮಾಜ್ ಮಾಡುವುದು ಕಂಡುಬಂದರೆ ಅದಕ್ಕೆ ಕಂಪನಿಗಳನ್ನೇ ಹೊಣೆ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಶುಕ್ರವಾರದ ನಮಾಜ್ ಅನ್ನು ಪಾರ್ಕ್ಗಳಂತಹ ತೆರೆದ ಸಾರ್ವಜನಿಕ ಸ್ಥಳಗಳಲ್ಲಿ ನಡೆಸದೆ ಮಸೀದಿಗಳಲ್ಲಿ ಮಾತ್ರ ನಡೆಸುವಂತೆ ಮುಸ್ಲಿಂ ಉದ್ಯೋಗಿಗಳಿಗೆ ಸೂಚಿಸಬೇಕು ಎಂದು ಉತ್ತರ ಪ್ರದೇಶ ಪೊಲೀಸರು ಕಂಪನಿಗಳಿಗೆ ಆದೇಶಿಸಿದ್ದಾರೆ.
ನೋಯ್ಡಾದಲ್ಲಿ ಪಾರ್ಕ್ಗಳಲ್ಲಿ ನಮಾಜ್ ಮಾಡುವುದು ಇತ್ತೀಚಿಗೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೋಯ್ಡಾದ ಎಲ್ಲಾ ಪೊಲೀಸ್ ಠಾಣೆಗಳು ಕಳೆದ ವಾರ ಈ ನೋಟಿಸ್ ಜಾರಿ ಮಾಡಿವೆ.
ಇನ್ನು ಪೊಲೀಸರ ಈ ನೋಟಿಸ್ ಇದೀಗ ವಿವಾದ ಸೃಷ್ಟಿಸಿದ್ದು, ಇದರ ಹಿಂದೆ ಉತ್ತರಪ್ರದೇಶ ಸರ್ಕಾರದ ಹುನ್ನಾರ ಅಡಗಿದೆ ಎಂದು ಹಲವರು ಆರೋಪಿಸಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.