
ಶಿವಮೊಗ್ಗ: ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ, ಪ್ರಚೋದನಾತ್ಮಕ ಸಂದೇಶಗಳನ್ನು ಹರಡಿದರೆ ಜಾಮೀನು ರಹಿತ ಪ್ರಕರಣ ದಾಖಲು ಮಾಡಿ ಬಂಧಿಸಲಾಗುವುದೆಂದು ಎಡಿಜಿಪಿ ಕಮಲಪಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲಪಂತ್, ರಾಜಧಾನಿ ಬೆಂಗಳೂರು ಬಿಟ್ಟರೇ ಅತಿ ಹೆಚ್ಚು ಎಫ್ ಐಆರ್ ಗಳು ಶಿವಮೊಗ್ಗದಲ್ಲಿ ದಾಖಲಾಗುತ್ತಿವೆ. ಶಿವಮೊಗ್ಗ ಮತ್ತು ಭದ್ರಾವತಿ ಸೇರಿ ಕಮಿಷನರೇಟ್ ಮಾಡುವ ಪ್ರಸ್ತಾಪ ಸದ್ಯ ಇಲ್ಲ, ಎಂದು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗಾಂಜಾ ಬೆಳೆಯುವ ಪ್ರಕರಣಗಳು , ಶಾಲಾ - ಕಾಲೇಜುಗಳಲ್ಲಿ ಗಾಂಜಾ ಮಾರಾಟದ ಪ್ರಕರಣಗಳು ನಡೆಯದಂತೆ ನಿಗಾ ವಹಿಸಲಾಗಿದೆ. ಅಲ್ಲದೇ ಡ್ರಗ್ಸ್ ಮತ್ತು ಗಾಂಜಾ ಮಾಫಿಯಾ ವಿರುದ್ಧ ಪೋಲಿಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತದೆ. ರಾಜ್ಯದಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ, ಬಾಂಗ್ಲಾದೇಶದ ವಲಸಿಗರ ಬಗ್ಗೆ ಪೋಲೀಸ್ ಇಲಾಖೆ ನಿಗಾ ವಹಿಸುತ್ತಿದೆ, ಎಂದು ಕಮಲ್ ಪಂತ್ ಅವರು ಹೇಳಿದ್ದಾರೆ.
ಶಿವಮೊಗ್ಗದ ಎಸ್ಪಿ ಚೇಂಬರ್ ನಿಂದ ಬೆಲೆಬಾಳುವ ಅನೆದಂತ ಕಣ್ಮರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿಯಿಂದ ಪ್ರತ್ಯೇಕ ತನಿಖೆ, ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯ ವತಿಯಿಂದ ಒಂದು ಎಫ್ ಐಆರ್ ದಾಖಲು ಮಾಡಿ ತನಿಖೆ ಕೈಗೊಳ್ಳಲಾಗಿದೆ. ನಮ್ಮ ಇಲಾಖೆಯ ಅಸ್ತಿ ಕಳೆದುಕೊಂಡ ನೋವು ಇದೆ. ಪತ್ತೆ ಹಚ್ಚುವ ಕೆಲಸ ಮಾಡುತ್ತೇವೆ, ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ, ಕೋಮು ಗಲಭೆ ವಿಷಯಗಳಲ್ಲಿ ಶಿವಮೊಗ್ಗ ಜಿಲ್ಲೆಯ ವಾತಾವರಣ ಸಾಕಷ್ಟು ಸುಧಾರಣೆ ಆಗಿದೆ, ಎಂದು ಅವರು ಅಭಿಪ್ರಯಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.