ಟಿಕೆಟ್‌ ವಂಚನೆ ಕೇಸಲ್ಲಿ ರೇಣುಕಾ ಚೌಧರಿ ವಿರುದ್ಧ ಜಾಮೀನು ರಹಿತ ವಾರೆಂಟ್‌

Published : Aug 31, 2019, 09:25 AM IST
ಟಿಕೆಟ್‌ ವಂಚನೆ ಕೇಸಲ್ಲಿ ರೇಣುಕಾ ಚೌಧರಿ ವಿರುದ್ಧ ಜಾಮೀನು ರಹಿತ ವಾರೆಂಟ್‌

ಸಾರಾಂಶ

ಟಿಕೆಟ್‌ ವಂಚನೆ ಕೇಸಲ್ಲಿ ರೇಣುಕಾ ಚೌಧರಿ ವಿರುದ್ಧ ಜಾಮೀನು ರಹಿತ ವಾರೆಂಟ್‌| ವಿಧಾನಸಭಾ ಟಿಕೆಟ್‌ ಕೊಡಿಸಲು 1.20 ಕೋಟಿ ರು. ಹಣ ಪಡೆದಿದ್ದ ಆರೋಪ

ತೆಲಂಗಾಣ[ಆ.31]: ವ್ಯಕ್ತಿಯೊಬ್ಬರಿಗೆ ವಿಧಾನಸಭಾ ಟಿಕೆಟ್‌ ಕೊಡಿಸಲು 1.20 ಕೋಟಿ ರು. ಹಣ ಪಡೆದಿದ್ದ ಆರೋಪದ ಪ್ರಕರಣವೊಂದರ ಸಂಬಂಧ, ಕೇಂದ್ರದ ಮಾಜಿ ಸಚಿವೆ, ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ವಿರುದ್ಧ ಸ್ಥಳೀಯ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಹಲವು ಬಾರಿ ನೋಟಿಸ್‌ ನೀಡಿದರೂ, ರೇಣುಕಾ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ.

ಏನಿದು ಪ್ರಕರಣ?

2014ರ ವಿಧಾನಸಭೆ ಚುನಾವಣೆಯಲ್ಲಿ ವೈರಾ ಕ್ಷೇತ್ರದಿಂದ ಸ್ಪರ್ಧೆಗೆ ಪಕ್ಷದಿಂದ ಟಿಕೆಟ್‌ ಕೊಡಿಸುವುದಾಗಿ ತಮ್ಮ ಪತಿ ರಾಮ್‌ಜಿ ನಾಯ್ಕರಿಂದ ರೇಣುಕಾ 1.20 ಕೋಟಿ ರು. ಪಡೆದಿದ್ದರು. ಆದರೆ ಅವರು ಟಿಕೆಟ್‌ ಕೊಡಿಸುವಲ್ಲಿ ವಿಫಲರಾಗಿದ್ದರು, ಜೊತೆಗೆ ಹಣವೂ ಹಿಂತಿರುಗಿಸದೇ ವಂಚಿಸಿದ್ದರು. ಇದರಿಂದ ಖಿನ್ನತೆಗೆ ಒಳಗಾದ ಪತಿ ಸಾವನ್ನಪ್ಪಿದ್ದರು ಎಂದು ಅವರ ಪತ್ನಿ ಬುಕ್ಯಾ ಚಂದ್ರಕಲಾ ಅವರು ರೇಣುಕಾ ವಿರುದ್ಧ ವಂಚನೆ, ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕನ ಬಂಧನ
Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು