
ಬೆಂಗಳೂರು, (ಅ.29): ಕರ್ನಾಟಕ ಬಂದ್ಗೆ ಕರೆ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ.
ಸಿಟಿ ಸಿವಿಲ್ ಕೋರ್ಟ್ ಕೆ.ಎಸ್. ಈಶ್ವರಪ್ಪಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. 2011 ರಲ್ಲಿ ಕರ್ನಾಟಕ ಬಂದ್ಗೆ ಈಶ್ವರಪ್ಪ ಕರೆ ನೀಡಿದ್ದರ ವಿರುದ್ಧ ವಕೀಲ ಧರ್ಮಪಾಲ್ ಖಾಸಗಿ ದೂರು ದಾಖಲಿಸಿದ್ದರು.
ಬಿಎಸ್ ಯಡಿಯೂರಪ್ಪ ಸಿಎಂ ಕುರ್ಚಿಯಿಂದ ಇಳಿದಾಗ ಕರ್ನಾಟಕ ಬಂದ್ಗೆ ಈಶ್ವರಪ್ಪ ಕರೆ ನೀಡಿದ್ದರು ಎನ್ನಲಾಗಿದೆ. ಈ ಹಿಂದೆ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೊಟೀಸ್ ನೀಡಿತ್ತು.
ಅನೇಕ ಬಾರಿ ನೊಟೀಸ್ ನೀಡಿದರೂ ಈಶ್ವರಪ್ಪ ಪ್ರತಿಕ್ರಿಯೆ ನೀಡಿಲ್ಲ . ಹೀಗಾಗಿ ಸಿಟಿ ಸಿವಿಲ್ ಕೋರ್ಟ್ನ ವಿಶೇಷ ನ್ಯಾಯಾಲಯ ಇಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.