
ಮಂಡ್ಯ (ಸೆ.22): ತಮಿಳುನಾಡಿಗೆ ನೀರು ನಿಲ್ಲಿಸಿದ್ದರೂ ಮಂಡ್ಯದಲ್ಲಿ ಪ್ರತಿಭಟನೆ ಕಾವು ಮಾತ್ರ ತಣ್ಣಗಾಗಿಲ್ಲ.
ಮಂಡ್ಯ ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಸಹಕಾರ ಚಳುವಳಿಗೆ ಸಹಕರಿಸುವಂತೆ ನೌಕರರಿಗೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಮನವಿ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಮಾದೇಗೌಡರು, ತಮಿಳುನಾಡಿಗೆ ಬಿಡಲು ಈಗ ನೀರಿಲ್ಲ, ಇನ್ನು ಸರ್ಕಾರಿ ಕಚೇರಿ ಬಂದ್ ಮಾಡಿ ಸಹಕಾರ ಕೊಡಿ ಎಂದು ಅಧಿಕಾರಿಗಳನ್ನು ಕೋರಿದ್ದೇವೆಂ ಹೇಳಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸರ್ಕಾರಿ ಕಚೇರಿಗಳಿಗೆ ತೆರಳಿದ ಹೋರಾಟಗಾರರು ಸಿಬ್ಬಂದಿಯನ್ನು ಕಚೇರಿಯಿಂದ ಹೊರಗೆ ಕಳಳುಹಿಸಿ, ಪ್ರತಿಭಟನೆಗೆ ಬೆಂಬಲಿಸುವಂತೆ ಶಾಂತ ರೀತಿಯಿಂದ ಮನವಿ ಮಾಡಿದರು.
ಮಂಡ್ಯದಿಂದ ಶ್ರೀರಂಗಪಟ್ಟಣದತ್ತ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಹೋರಾಟಗಾರು ಟಿಕೆಟ್ ರಹಿತ ಪ್ರಯಾಣ ಮಾಡಿದ್ದಾರೆ.
ಈ ವೇಳೆ ಟಿಕೆಟ್ ರಹಿತ ಪ್ರಯಾಣಿಕರನ್ನು ಬಂಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಜಿ. ಮಾದೇಗೌಡರು ಫೋನ್ ಮೂಲಕವೇ ಅಧಿಕಾರಿಗಳಿಗೆ ಕರೆ ಮಾಡಿ ಎಚ್ಚರಿಕೆ ನೀಡಿ ತಕ್ಷಣವೇ ಬಿಡುವಂತೆ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.