
ನವದೆಹಲಿ[ಜೂ.24]: ಪಕ್ಷದ ಅಧ್ಯಕ್ಷ ಹುದ್ದೆಗೆ ಗಾಂಧೀ- ನೆಹರು ಕುಟುಂಬೇತರ ವ್ಯಕ್ತಿ ಆಯ್ಕೆಗೆ ಕಾಂಗ್ರೆಸ್ನೊಳಗೆ ವಿರೋಧ ವ್ಯಕ್ತವಾಗಿರುವಾಗಲೇ, ಗಾಂಧೀ- ನೆಹರು ಕುಟುಂಬದ ಸದಸ್ಯರು ಪಕ್ಷದ ಅಧ್ಯಕ್ಷರಾಗದೇ ಇದ್ದರೂ, ಪಕ್ಷ ಉಳಿಯಬಲ್ಲದು ಎಂದು ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನವೊಂದನ್ನು ನೀಡಿರುವ ಅಯ್ಯರ್ ‘ಗಾಂಧೀ- ನೆಹರು ಕುಟುಂಬೇತರರು ಪಕ್ಷದ ಅಧ್ಯಕ್ಷರಾಗಬಹುದು. ಆದರೆ ಗಾಂಧೀ ಕುಟುಂಬ ಸಂಘಟನೆಯೊಳಗೆ ಸಕ್ರಿಯರಾಗಿರಬೇಕು’ ಎಂದು ಹೇಳಿದ್ದಾರೆ.
‘ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆದರೆ ಒಳ್ಳೆಯದು. ಆದರೆ ಕೆಲವೊಮ್ಮೆ ರಾಹುಲ್ ಅವರ ಅಭಿಪ್ರಾಯಗಳನ್ನೂ ನಾವು ಗೌರವಿಸಲೇಬೇಕು. ಪಕ್ಷದ ಅಧ್ಯಕ್ಷ ಹುದ್ದೆಯನ್ನು ಗಾಂಧೀ- ನೆಹರೂ ಕುಟುಂಬ ವಹಿಸಿಕೊಳ್ಳದೇ ಇದ್ದರೂ, ಪಕ್ಷದ ಉಳಿಯಬಲ್ಲದು. ಆದರೆ ಇದಕ್ಕಾಗಿ ಗಾಂಧೀ ಕುಟುಂಬ ಸಂಘಟನೆಯಲ್ಲಿ ಸಕ್ರಿಯರಾಗಿರಬೇಕು. ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಎದುರಾದಲ್ಲಿ ಅವರು ಪರಿಹಾರ ಸೂಚಿಸಬೇಕು ಎಂಬುದು ನನ್ನ ಅಭಿಪ್ರಾಯ. ಈ ಹಿಂದೆಯೂ ಗಾಂಧೀ- ನೆಹರೂ ಕುಟುಂಬದವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು, ಪಕ್ಷವನ್ನು ಮುನ್ನಡೆಸಿದ ಉದಾಹರಣೆ ನಮ್ಮ ಮುಂದಿದೆ ’ ಎಂದು ಅಯ್ಯರ್ ಹೇಳಿದ್ದಾರೆ.
ಹೊಸ ಅಧ್ಯಕ್ಷರ ಹುಡುಕಲು ರಾಹುಲ್ ಪಕ್ಷದ ನಾಯಕರಿಗೆ ಒಂದು ತಿಂಗಳ ಗಡುವು ನೀಡಿದ್ದಾರೆ. ಆದರೆ ಸ್ವತಃ ರಾಹುಲ್ ಅವರೇ ಹುದ್ದೆಯಲ್ಲಿ ಮುಂದುವರೆಬೇಕೆಂಬುದು ಪಕ್ಷದಲ್ಲಿನ ಬಹುತೇಕ ನಾಯಕರ ಒತ್ತಾಸೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.