
ಸಿಯೋಲ್ : ಜಮ್ಮು ಕಾಶ್ಮೀರದ ಪುಲ್ವಾಮಾ ದಾಳಿಗೆ ಉತ್ತರ ಕೊರಿಯಾ ಖಂಡನೆ ವ್ಯಕ್ತಪಡಿಸಿದೆ.
ಅತ್ಯಂತ ಕಟ್ಟುನಿಟ್ಟಿನ ಆಡಳಿತಕ್ಕೆ ಹೆಸರಾಗಿರುವ ಸರ್ವಾಧಿಕಾರಿ ಎಂದೇ ಬಿಂಬಿಸಲಾದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಸರ್ಕಾರವೇ ಸ್ವತಃ ಈ ಭೀಕರ ದಾಳಿಯನ್ನು ಖಂಡಿಸಿದೆ.
ನಾವು 1 ಅಣುಬಾಂಬ್ ಹಾಕಿದ್ರೆ ಭಾರತ 20 ಹಾಕಿ ನಮ್ಮನ್ನು ಮುಗಿಸುತ್ತೆ!
ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿ 44 ಯೋಧರು ಹುತಾತ್ಮರಾಗಿದ್ದು, ಈ ಘಟನೆ ಅತ್ಯಂತ ದುಃಖಕರ ಎಂದು ಉತ್ತರ ಕೊರಿಯಾದ ವಿದೇಶಾಂಗ ಸಚಿವಾಲಯ ಹೇಳಿದೆ.
ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಸಂಘಟನೆ ಪುಲ್ವಾಮ ದಾಳಿಯ ಹೊಣೆ ಹೊತ್ತಿದ್ದು, ಇಂತಹ ಉಗ್ರ ದಾಳಿಯನ್ನು ನಮ್ಮ ದೇಶ ತೀವ್ರವಾಗಿ ಖಂಡಿಸುತ್ತದೆ ಎಂದಿದೆ.
ಟೊಮ್ಯಾಟೋಗೆ ಬಾಂಬ್ ನಿಂದ ಉತ್ತರಿಸ್ತೇವೆ: ಜೋಕರ್ ಆದ ಪಾಕ್ ಪತ್ರಕರ್ತ!
ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆ ಸೇರಿದ ಉಗ್ರನೋರ್ವ ಸ್ಫೋಟಕ ತುಂಬಿದ್ದ ಕಾರನ್ನು ಭಾರತೀಯ ಯೋಧರು ತೆರಳುತ್ತಿದ್ದ ಬಸ್ ಗೆ ಡಿಕ್ಕಿಯಾಗಿಸಿ ಈ ವೇಳೆ 44 ಯೋಧರು ಹುತಾತ್ಮರಾಗಿದ್ದರು. ಬಳಿಕ ಈ ದಾಳಿ ಬಗ್ಗೆ ವಿವಿಧ ದೇಶಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ