ಸೇನಾ ಹೆಲಿಪಾಕ್ಟರ್ ಅಪಘಾತ: ಲೆ.ಜ. ರಣ್‌ಬೀರ್ ಸಿಂಗ್ ಪಾರು!

Published : Oct 24, 2019, 05:23 PM IST
ಸೇನಾ ಹೆಲಿಪಾಕ್ಟರ್ ಅಪಘಾತ: ಲೆ.ಜ. ರಣ್‌ಬೀರ್ ಸಿಂಗ್ ಪಾರು!

ಸಾರಾಂಶ

ಅಪಘಾತಕ್ಕೀಡಾದ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್‌| ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅಪಘಾತ| ಹೆಲಿಕಾಪ್ಟರ್‌ನಲ್ಲಿದ್ದ ಸೇನೆಯ ಉತ್ತರ ವಿಭಾಗದ ಕಮಾಂಡರ್ ಲೆ.ಜ. ರಣ್‌ಬೀರ್ ಸಿಂಗ್| ಬೇಡರ್ ಪ್ರದೇಶದಲ್ಲಿ ತಾಂತ್ರಿಕ ದೋಷಗಳಿಂದ ಹೆಲಿಕಾಪ್ಟರ್ ಅಪಘಾತ| ಲೆ.ಜ. ರಣ್‌ಬೀರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯ| ಎಲ್ಲ ಅಧಿಕಾರಿಗಳೂ ಪ್ರಾಣಾಪಾಯದಿಂದ ಪಾರು| 

ಶ್ರೀನಗರ(ಅ.24): ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್‌ವೊಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದ್ದು, ಸೇನೆಯ ಉತ್ತರ ವಿಭಾಗದ ಕಮಾಂಡರ್ ಲೆ.ಜ. ರಣ್‌ಬೀರ್ ಸಿಂಗ್ ಅಪಾಯದಿಂದ ಪಾರಾಗಿದ್ದಾರೆ.


ಪೂಂಚ್ ಜಿಲ್ಲೆಯ ಬೇಡರ್ ಪ್ರದೇಶದಲ್ಲಿ ತಾಂತ್ರಿಕ ದೋಷಗಳಿಂದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಲೆ.ಜ. ರಣ್‌ಬೀರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ.

ಹೆಲಿಕಾಪ್ಟರ್ ಅಪಘಾತಕ್ಕೀಡಾದ ಸ್ಥಳಕ್ಕೆ ಕೂಡಲೇ ಧಾವಿಸಿದ ರಕ್ಷಣಾ ತಂಡ, ಲೆ.ಜ. ರಣ್‌ಬೀರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳು ರಕ್ಷಿಸಿದೆ. ಎಲ್ಲಾ ಅಧಿಕಾರಿಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಏರ್‌ಪೋರ್ಟ್‌ ಪಿಕ್-ಅಪ್ ನಿಯಮ ಸಡಿಲಿಕೆ: ಫ್ರೀ ಪಾರ್ಕಿಂಗ್ 15 ನಿಮಿಷಕ್ಕೆ ವಿಸ್ತರಣೆ!
'ಲಯನ್ ಕಿಂಗ್' ನಟಿಯ ದುರಂತ ಅಂತ್ಯ: ಬಾಯ್‌ಫ್ರೆಂಡ್‌ನಿಂದಲೇ ಕೊಲೆ