ದೀಪಾ ಹಚ್ಚುವುದಕ್ಕೂ ಮುಂದೊಂದು ದಿನ ಆಕ್ಷೇಪ ಬರಬಹುದು: ಆರೆಸ್ಸೆಸ್

Published : Oct 15, 2017, 09:27 AM ISTUpdated : Apr 11, 2018, 12:52 PM IST
ದೀಪಾ ಹಚ್ಚುವುದಕ್ಕೂ ಮುಂದೊಂದು ದಿನ ಆಕ್ಷೇಪ ಬರಬಹುದು: ಆರೆಸ್ಸೆಸ್

ಸಾರಾಂಶ

ಭೋಪಾಲದಲ್ಲಿ ನಡೆದ ಆರ್‌'ಎಸ್'ಎಸ್‌'ನ ಮೂರು ದಿನಗಳ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಳದ ಮುಕ್ತಾಯದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ(ಅ.15): ರಾಷ್ಟ್ರ ರಾಜಧಾನಿ ವಲಯದಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಎಲ್ಲ ಪಟಾಕಿಗಳು ಮಾಲಿನ್ಯ ತರುವುದಿಲ್ಲ. ದೀಪಾವಳಿ ಸಂದರ್ಭದಲ್ಲಿ ದೀಪ ಬೆಳಗುವುದಕ್ಕೂ ನಾಳೆ ಯಾರೋ ಆಕ್ಷೇಪ ತೆಗೆಯಬಹುದು ಎಂದು ಹೇಳಿದ್ದಾರೆ.

ಭೋಪಾಲದಲ್ಲಿ ನಡೆದ ಆರ್‌'ಎಸ್'ಎಸ್‌'ನ ಮೂರು ದಿನಗಳ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಳದ ಮುಕ್ತಾಯದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಇದೇ ವೇಳೆ ಜಾತಿ ಆದಾರಿತ ಮೀಸಲಾತಿ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಶೋಷಿತರ ಮೇಲೆತ್ತಲು ಸಹಾಯಕವಾದ ಮೀಸಲಾತಿಯ ಬಗ್ಗೆ ಬಾಬಾ ಸಾಹೇ ಅಂಬೇಡ್ಕರ್ ಹೊಂದಿದ್ದ ನಿಲುವುಗಳನ್ನು ಒಪ್ಪುವುದಾಗಿ ಹೇಳಿದ್ದಾರೆ. ಸಮಾಜಕ್ಕೆ ಎಲ್ಲಿಯವರೆಗೆ ಮೀಸಲಾತಿ ಅಗತ್ಯವಿರುತ್ತದೋ ಅಲ್ಲಿಯವರೆಗೆ ನೀಡಬೇಕು ಎಂದು ಜೋಶಿ ಅಭಿಪ್ರಾಯಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಲಸದಾಳು ಜೊತೆಗೇ ಯಜಮಾನಿಯ ಕುಚ್​ ಕುಚ್! ಅಮ್ಮನ ಕಳ್ಳಾಟ ಕಣ್ಣಾರೆ ಕಂಡ ಮಗ, 6 ತಿಂಗಳ ಕೊಲೆ ಕೇಸ್ ಈಗ ಬಯಲಾಗಿದ್ದೇ ರೋಚಕ!​​
Karnataka Hate Speech Bill 2025: ಮಸೂದೆಯನ್ನೇ ಓದದೆ ಕುರುಡಾಗಿ ಪ್ರತಿಪಕ್ಷಗಳಿಂದ ಕ್ಷುಲ್ಲಕ ವಿರೋಧ