ಆಧ್ಯಾತ್ಮಿಕ ಕೊರತೆಯೇ ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣ

Published : Apr 29, 2017, 12:42 PM ISTUpdated : Apr 11, 2018, 01:09 PM IST
ಆಧ್ಯಾತ್ಮಿಕ ಕೊರತೆಯೇ ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣ

ಸಾರಾಂಶ

ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ಆತ್ಮಹತ್ಯೆ ಮನಸ್ಥಿತಿಯಿಂದ ಹೊರಬರಲು ಸಾಧ್ಯವೆಂದು ರೈತರಿಗೆ ಗುರೂಜಿ ಸಲಹೆ ನೀಡಿದ್ದಾರೆ.

ಮುಂಬೈ(ಏ.29): ದೇಶಾದ್ಯಂತ ರೈತರ ಆತ್ಮಹತ್ಯೆಗೆ ಬಡತನವೊಂದೇ ಕಾರಣವಲ್ಲ. ಅವರಲ್ಲಿನ ಆಧ್ಯಾತ್ಮಿ ಕತೆಯ ಕೊರತೆಯೂ ಕಾರಣವಾಗಿದೆ ಎಂದು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ‘ನಾವು ಮಹಾರಾಷ್ಟ್ರದ ವಿದರ್ಭದ 512 ಕಿ.ಮೀ ವ್ಯಾಪ್ತಿಯ ಹಳ್ಳಿಗಳಲ್ಲಿ ಪಾದಯಾತ್ರೆ ನಡೆಸಿದ್ದೇವೆ. ಇದರ ಆಧಾರದಲ್ಲಿ ಹೇಳುವುದಾದರೆ, ರೈತರ ಆತ್ಮಹತ್ಯೆಗೆ ಬಡತನವೊಂದೇ ಕಾರಣವಲ್ಲ. ಅವರಲ್ಲಿ ಆಧ್ಯಾತ್ಮಿಕ ಕೊರತೆಯೂ ಕಾರಣವಾಗಿದೆ. ಹಾಗಾಗಿ, ಈ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರೂ ರೈತರಿಗೆ ಆಧ್ಯಾತ್ಮಿಕತೆಯನ್ನು ತಲುಪಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ,' ಎಂದಿದ್ದಾರೆ.

ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ಆತ್ಮಹತ್ಯೆ ಮನಸ್ಥಿತಿಯಿಂದ ಹೊರಬರಲು ಸಾಧ್ಯವೆಂದು ರೈತರಿಗೆ ಗುರೂಜಿ ಸಲಹೆ ನೀಡಿದ್ದಾರೆ.

ಸರ್ಕಾರದ ಅಧಿಕೃತ ವರದಿಯಂತೆ ಕಳೆದ ಜನವರಿಯಲ್ಲಿ ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಸುಮಾರು 400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!