ಉನ್ನತ ಹುದ್ದೆಯಲ್ಲಿರುವವರು ಕಡಿಮೆ ಸಂಬಳಕ್ಕೆ ಒಪ್ಪಿಕೊಂಡರೆ ಯುವ ಉದ್ಯೋಗಿಗಳ ಕೆಲಸ ಸೇಫ್: ನಾರಾಯಣಮೂರ್ತಿ

Published : Jun 01, 2017, 05:17 PM ISTUpdated : Apr 11, 2018, 12:48 PM IST
ಉನ್ನತ ಹುದ್ದೆಯಲ್ಲಿರುವವರು ಕಡಿಮೆ ಸಂಬಳಕ್ಕೆ ಒಪ್ಪಿಕೊಂಡರೆ ಯುವ ಉದ್ಯೋಗಿಗಳ ಕೆಲಸ ಸೇಫ್: ನಾರಾಯಣಮೂರ್ತಿ

ಸಾರಾಂಶ

ಇನ್ಫೋಸಿಸ್'ನಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು ಆಡಳಿತ ಮಂಡಳಿಯ ಹಿರಿಯ ಉದ್ಯೋಗಿಗಳು ಕಡಿಮೆ ಸಂಬಳಕ್ಕೆ ಒಪ್ಪಿಕೊಂಡರೆ ಯುವ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುವುದಿಲ್ಲವೆಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

ನವದೆಹಲಿ (ಜೂ.01): ಇನ್ಫೋಸಿಸ್'ನಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು ಆಡಳಿತ ಮಂಡಳಿಯ ಹಿರಿಯ ಉದ್ಯೋಗಿಗಳು ಕಡಿಮೆ ಸಂಬಳಕ್ಕೆ ಒಪ್ಪಿಕೊಂಡರೆ ಯುವ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುವುದಿಲ್ಲವೆಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

ಕಂಪನಿಯ ಹಿರಿಯ ಉದ್ಯೋಗಿಗಳು ಸ್ವಲ್ಪ ಹೊಂದಾಣಿಕೆ ಮಾಡಿಕೊಂಡು ಕಡಿಮೆ ಸಂಬಳಕ್ಕೆ ಒಪ್ಪಿಕೊಂಡರೆ ಕಿರಿಯ ಉದ್ಯೋಗಿಗಳನ್ನು ಕೆಲಸದಲ್ಲಿ ಮುಂದುವರೆಸಲಾಗುತ್ತದೆ. 2001 ರಲ್ಲಿ ಮಾರುಕಟ್ಟೆಯಲ್ಲಿ ನಮಗೆ ಹಿನ್ನಡೆಯಾದಾಗ ಆಡಳಿತ ಮಂಡಳಿಯ ಹಿರಿಯರೊಂದಿಗೆ ನಾವು ಕುಳಿತು ಮಾತುಕತೆ ನಡೆಸಿದ್ದೆವು. ಯುವ ಉದ್ಯೋಗಿಗಳ ಕೆಲಸವನ್ನು ಉಳಿಸಲು ನಾವೆಲ್ಲರೂ ಸ್ವಲ್ಪ ಮಟ್ಟಿಗೆ ತ್ಯಾಗ ಮಾಡಲು ಸಿದ್ಧವಾಗಿದ್ದೆವು. ಅದೇ ರೀತಿ ಈ ಬಾರಿಯೂ ಒಪ್ಪಿಕೊಂಡರೆ ಯಾರಿಗೂ ಉದ್ಯೋಗ ಕಡಿತ ಮಾಡುವುದಿಲ್ಲವೆಂದು ನಾರಾಯಣ ಮೂರ್ತಿ ಹೇಳಿದ್ದಾರೆ.

ಐಟಿ ವಲಯದಲ್ಲಿ ಈ ಹಿಂದೆ ಕೂಡಾ ಭಾರೀ ಹಿನ್ನಡೆಯಾಗಿತ್ತು. 2001, 2008 ರಲ್ಲಿ ಬಿಕ್ಕಟ್ಟು ಎದುರಾಗಿತ್ತು. ಅದಕ್ಕೆ ನಾವು ಪರಿಹಾರವನ್ನು ಕಂಡುಕೊಂಡಿದ್ದೆವು.  ಹಾಗಾಗಿ ಆತಂಕಗೊಳ್ಳುವ ಅಗತ್ಯವಿಲ್ಲ.  ಇವೆಲ್ಲ ಹೊಸದೇನಲ್ಲ ಎಂದು ನಾರಾಯಣ ಮೂರ್ತಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿ: ಮನೆಯಿಂದ 10 ಕಿಲೋಮೀಟರ್‌ ದೂರ ಇರುವಾಗ ಅಪಘಾತ, ಒಂದೇ ಕುಟುಂಬದ ಮೂವರ ಸಾವು!
ದರ್ಶನ್ ಬಳಿಕ ಅಭಿಮಾನಿಗಳ ಅಶ್ಲೀಲ ಕಾಮೆಂಟ್‌ಗೆ ವಿಜಯಲಕ್ಷ್ಮಿ ಕೆಂಡಾಮಂಡಲ; 150 ಫೊಟೋ ಸಮೇತ ದೂರು!