ನಾ ಮಿನಿಸ್ಟರ್: ಸಚಿವನ ಧಿಮಾಕಿಗೆ ಮೋದಿಗೂ ಚಕ್ಕರ್!

Published : Sep 16, 2018, 02:08 PM ISTUpdated : Sep 19, 2018, 09:27 AM IST
ನಾ ಮಿನಿಸ್ಟರ್: ಸಚಿವನ ಧಿಮಾಕಿಗೆ ಮೋದಿಗೂ ಚಕ್ಕರ್!

ಸಾರಾಂಶ

ಇಂಧನ ದರ ಏರಿಕೆ ನನಗೆ ಎಫೆಕ್ಟ್ ಆಗಿಲ್ಲ! ಕೇಂದ್ರ ಸಚಿವ ರಾಮದಾಸ್ ಅಠವಾಳೆ ಹೇಳಿಕೆ! ನಾನೊಬ್ಬ ಸಚಿವ, ಬೆಲೆ ಏರಿಕೆ ಎಫೆಕ್ಟ್ ಆಗಲ್ಲ! ಅಠವಾಳೆ ಹೇಳಿಕೆಗೆ ಎಲ್ಲೆಡೆ ಭಾರೀ ವಿರೋಧ

ಜೈಪುರ(ಸೆ.16): ನಾನು ಸಚಿವ, ಹೀಗಾಗಿ ನನಗೆ ಇಂಧನ ದರ ಏರಿಕೆಯಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಆಠವಲೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ದರ ಏರಿಕೆಯಿಂದ ನನಗೆ ತೊಂದರೆಯಾಗುತ್ತಿಲ್ಲ, ನಾನು ಸಚಿವ ಸ್ಥಾನ ಕಳೆದು ಕೊಂಡಾಗ ತೈಲ ದರ ಏರಿಕೆಯಿಂದ ಬಳಲುತ್ತೇನೆ ಎಂದು ಹೇಳಿದ್ದಾರೆ.

ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತೊಂದರೆ ಅನುಭಿಸುತ್ತಿದ್ದಾರೆ, ಇಂಧನ ಬೆಲೆ ಕಡಿಮೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅಠವಾಳೆ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ಆಯಾ ರಾಜ್ಯಗಳು ಇಂಧನದ ಮೇಲೆ ವಿಧಿಸುವ ತೆರಿಗೆ ಕಡಿತಗೊಳಿಸಿದರೆ ಮಾತ್ರ ಬೆಲೆ ಏರಿಕೆ ತಡೆಗಟ್ಟಬಹುದು ಎಂದು ಅಠವಾಳೆ ಹೇಳಿದ್ದಾರೆ. ಇನ್ನು ಅಠವಾಳೆ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮೋದಿ ಸರ್ಕಾರದಲ್ಲಿ ಸಚಿವರು ಕೇವಲ ತಮ್ಮ ದೌಲತ್ತು ಪ್ರದರ್ಶನ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ: ಶ್ರೀ ಶ್ರೀ ರವಿಶಂಕರ್ ಗುರೂಜಿ
ಭಾರತ ವಿರೋಧಿ ತೀವ್ರಗಾಮಿ ನಾಯಕನ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ